Slide
Slide
Slide
previous arrow
next arrow

ಮಹಿಳೆಯ ಅನುಮಾನಾಸ್ಪದ ಸಾವು : ಸೂಕ್ತ ತನಿಖೆಗೆ ಆಗ್ರಹ

300x250 AD

ಭಟ್ಕಳ:ತೋಟದ ಬಾವಿಯಲ್ಲಿ ಬಿದ್ದು ಮಹಿಳೆ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾಳೆ ಎಂದು ಮುರುಡೇಶ್ವರ ಪೊಲೀಸ ಠಾಣೆಯಲ್ಲಿ ಮೃತಳ ಸಹೋದರ ಪ್ರಕರಣ ದಾಖಲಿಸಿದ ಘಟನೆ ನಡೆದಿದೆ.

ಮೃತ ಮಹಿಳೆ ಲಕ್ಷ್ಮೀ ವೆಂಕಟೇಶ ಗೊಂಡ (32) ಎಂದು ತಿಳಿದು ಬಂದಿದೆ. ಮೃತ ಮಹಿಳೆಯ ಪತಿ ವೆಂಕಟೇಶ ರಾಮಾ ಗೊಂಡ ಪತ್ನಿ ಸಾವಿನ ವಿಚಾರ ತಿಳಿದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೂ ನಡೆದಿದೆ.

ಈಕೆ ಕಳೆದ ಒಂದುವರೆ ವರ್ಷದ ಹಿಂದೆ ಮುರ್ಡೇಶ್ವರದ ಕಟಗಾರಕೊಪ್ಪದ ಅತ್ತಿಬಾರ ಗ್ರಾಮದ ವೆಂಕಟೇಶ ರಾಮಾ ಗೊಂಡ ಜೊತೆ ಮದುವೆ ಆಗಿದ್ದಳು. ಭಾನುವಾರದಂದು ರಾತ್ರಿ 7 ರಿಂದ 7.30 ರ ಸುಮಾರಿಗೆ ಅತ್ತಿಬಾರದ ತೋಟದ ಬಾವಿಯಲ್ಲಿ ಬಿದ್ದು ಮೃತ ಪಟ್ಟಿದ್ದಾಳೆ. ಆದರೆ ತನ್ನ ಅಕ್ಕ ಯಾವ ರೀತಿಯಲ್ಲಿ ಸಾವನ್ನಪ್ಪಿದ್ದಾಳೆ ಎಂದು ನನಗೆ ಅನುಮಾನವಿದ್ದು, ಸಾವಿಗೆ ನಿಜವಾದ ಕಾರಣವನ್ನು ತಿಳಿಯಲು ತನಿಖೆ ಮಾಡಬೇಕೆಂದು ಮುರುಡೇಶ್ವರ ಪೋಲಿಸ್ ಠಾಣೆಯಲ್ಲಿ ಮೃತ ಮಹಿಳೆಯ ಸೋಹದರ ಜನ್ನ ತಿಮ್ಮಪ್ಪ ಗೊಂಡ ದೂರು ದಾಖಲಿಸಿದ್ದಾರೆ.

300x250 AD

ಘಟನೆಯ ಬಗ್ಗೆ ಮಾಹಿತಿ ತಿಳಿದ ತಹಸೀಲ್ದಾರ್ ತಿಪ್ಪೇಸ್ವಾಮಿ ನೇತೃತ್ವದಲ್ಲಿ ಸಿಪಿಐ ಸಂತೋಷ ಕಾಯ್ಕಿಣಿ, ಪಿಎಸೈ ಮಂಜುನಾಥ ಹಾಗೂ ಪೊಲೀಸ್ ಸಿಬ್ಬಂದಿಗಳು ಅತ್ತಿಬಾರ ಗ್ರಾಮದ ಮೃತಳ ಮನೆಗೆ ತೆರಳಿ ಸ್ಥಳ ಪರಿಶೀಲನೆ ಮಾಡಿ ಪಂಚನಾಮೆಯನ್ನು ನಡೆಸಿದರು. ನಂತರ ಮೃತ ದೇಹವನ್ನು ಮುರುಡೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತರಲಾಗಿದ್ದು, ಸೋಮವಾರದಂದು ಮೃತಳ ಮರಣೋತ್ತರ ಪರೀಕ್ಷೆಯನ್ನು ಆಸ್ಪತ್ರೆಯ ವೈದ್ಯರು ನಡೆಸಿದರು.

ಈ ವೇಳೆ ಆಸ್ಪತ್ರೆಯತ್ತ ಜಮಾಯಿಸಿದ ಮೃತಳ ತಂದೆಯ ಕುಟುಂಬದವರು ಸಂಬಂಧಿಕರು ನ್ಯಾಯಕ್ಕಾಗಿ ಆಸ್ಪತ್ರೆಯ ಮುಂದೆ ಪ್ರತಿಭಟಿಸಿದರು. ಸ್ಥಳಕ್ಕೆ ಬಂದ ಪಿಎಸೈ ಮಂಜುನಾಥ ಹಾಗೂ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಪದಾಧಿಕಾರಿಗಳ ಜೊತೆಗೆ ಮಾತಿನ ಚಕಮಕಿ ಏರ್ಪಟ್ಟಿತ್ತು. ಮೃತಳ ತಮ್ಮ ಹಾಗೂ ಕುಟುಂಬದವರು ಅನುಮಾನಾಸ್ಪದ ಸಾವಿನ ಬಗ್ಗೆ ದೂರು ನೀಡಿದ್ದು ಗಂಡನ ಕುಟುಂಬದವರನ್ನು ಬಂಧಿಸಿ ಅವರಿಗೆ ನ್ಯಾಯ ನೀಡಬೇಕೆಂದು ಆಗ್ರಹಿಸಿದರು.

Share This
300x250 AD
300x250 AD
300x250 AD
Back to top