Slide
Slide
Slide
previous arrow
next arrow

ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ ಶಾಸಕ ಭೀಮಣ್ಣ

300x250 AD

ಸಿದ್ದಾಪುರ: ಶಾಸಕ ಭೀಮಣ್ಣ ನಾಯ್ಕ ತಾಲೂಕಿನ ದೊಡ್ಮನೆ ಹಾಗೂ ಕ್ಯಾದಗಿ ಪಂಚಾಯ್ತಿ ವ್ಯಾಪ್ತಿಯ ಕಾಂಗ್ರೆಸ್ ಘಟಕ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಕಾರ್ಯಕರ್ತರು ಹಾಗೂ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.

ಹಸ್ವಿಗೊಳಿ ಹಾಗೂ ಕ್ಯಾದಗಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕರ್ತರು ನೀಡಿದ ಅಭಿನಂದನೆ ಸ್ವೀಕರಿಸಿ, ಚುನಾವಣೆಯ ಪೂರ್ವ ಭರವಸೆ ನೀಡಿದಂತೆ ಸರ್ಕಾರ ಈಗಾಗಲೇ ನಾಲ್ಕು ಗ್ಯಾರೆಂಟಿಗಳನ್ನು ಜಾರಿಗೆ ತಂದಿದೆ. ಸಾರ್ವಜನಿಕರು ಸರ್ಕಾರದ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ನನಗೆ ಹಾರ-ತುರಾಯಿ ಹಾಕಿ ಅಭಿನಂದಿಸುವ ಬದಲು ಕೆಲಸದ ಪತ್ರ ನೀಡಿ ಎಂದು ಹೇಳಿದರೂ ಸಹ ನಿಮ್ಮ ಒತ್ತಡಕ್ಕೆ ಮಣಿದು ಅಭಿನಂದನೆ ಸ್ವೀಕರಿಸುತ್ತಿದ್ದೇನೆ. ಕ್ಷೇತ್ರದಲ್ಲಿ ಕುಡಿಯುವ ನೀರು ಹಾಗೂ ರಸ್ತೆಗೆ ಆದ್ಯತೆ ನೀಡಲಾಗುವುದು. ಹಂತ ಹಂತವಾಗಿ ಆದ್ಯತೆಯ ಮೇರೆಗೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದು ಎಂದರು.

300x250 AD

ವೇದಿಕೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ, ಡಿಸಿಸಿ ಉಪಾಧ್ಯಕ್ಷ ವಿ.ಎನ್.ನಾಯ್ಕ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಜಿ.ನಾಗರಾಜ, ಸಿ.ಆರ್.ನಾಯ್ಕ, ಪ್ರಮುಖರಾದ ಎಂ.ಜಿ.ನಾಯ್ಕ ಹಾದ್ರಿಮನೆ, ವಿವೇಕ ಭಟ್ ಮತ್ತಿತರರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top