Slide
Slide
Slide
previous arrow
next arrow

ಗೋಕರ್ಣದ ಮುಖ್ಯ ಕಡಲಲ್ಲಿ ಮುಳುಗುತ್ತಿದ್ದ 8 ಮಂದಿಯ ರಕ್ಷಣೆ

300x250 AD

ಗೋಕರ್ಣ: ಇಲ್ಲಿನ ಮುಖ್ಯ ಕಡಲತೀರದಲ್ಲಿ ಈಜಲು ತೆರಳಿದ್ದ ಸಂದರ್ಭದಲ್ಲಿ ಸಮುದ್ರದ ಅಲೆಗೆ ಸಿಲುಕಿ ಮುಳುಗುತ್ತಿದ್ದ ಒಂದೇ ಕುಟುಂಬದ 7 ಮಂದಿ ಸೇರಿದಂತೆ ಒಟ್ಟೂ 8 ಮಂದಿ ಪ್ರವಾಸಿಗರನ್ನು ರಕ್ಷಣೆ ಮಾಡಿರುವ ಘಟನೆ ಮಂಗಳವಾರ ನಡೆದಿದೆ.

ಹುಬ್ಬಳ್ಳಿಯಿಂದ ಒಂದೇ ಕುಟುಂಬದ ‌7 ಮಂದಿ ಗೋಕರ್ಣಕ್ಕೆ ಪ್ರವಾಸಕ್ಕೆಂದು ಬಂದಿದ್ದು, ಈ ವೇಳೆ ಸಮುದ್ರದಲ್ಲಿ ಈಜಲು ತೆರಳಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಅಲ್ಲದೇ, ಮತ್ತೋರ್ವ ವ್ಯಕ್ತಿ ಹುಬ್ಬಳ್ಳಿಯಿಂದ ಪಿಂಡ ಪ್ರದಾನ ಮಾಡಲು ಬಂದಿದ್ದ ಎಲ್.ವಿ.ಪಾಟೀಲ್‌ನನ್ನೂ ಸಹ ರಕ್ಷಣೆ ಮಾಡಲಾಗಿದೆ.

ಒಂದೇ ಕುಟುಂಬದವರಾದ ಪರಶುರಾಮ (44) ರುಕ್ಕಿಣಿ (38), ಧೀರಜ್ (14), ಅಕ್ಷರ (14), ಖುಷಿ (13) ದೀಪಿಕಾ (12)ನಂದ ಕಿಶೋರ (10) ಸಮುದ್ರದಲ್ಲಿ ಮುಳುಗುತ್ತಿದ್ದ ವ್ಯಕ್ತಿಗಳಾಗಿದ್ದಾರೆ.

300x250 AD

ಲೈಫ್ ಗಾರ್ಡ್ ಸಿಬ್ಬಂದಿಗಳಾದ ಶಿವಪ್ರಸಾದ ಅಂಬಿಗ, ಲೋಕೇಶ ಹರಿಕಾಂತ ಈ 8 ಮಂದಿಯನ್ನು ರಕ್ಷಿಸಿದ್ದಾರೆ. 

Share This
300x250 AD
300x250 AD
300x250 AD
Back to top