Slide
Slide
Slide
previous arrow
next arrow

ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ಲಿಫ್ಟ್ ಸೌಲಭ್ಯ ; ನಿವೇದಿತ್ ಆಳ್ವಾ ಕಾರ್ಯಕ್ಕೆ ಮೆಚ್ಚುಗೆ

300x250 AD

ಕುಮಟಾ: ಹೊನ್ನಾವರ ಸರ್ಕಾರಿ ಆಸ್ಪತ್ರೆಯ ಎರಡನೇ ಮಹಡಿಗೆ ತೆರಳಲು ಲಿಫ್ಟ್ ಒದಗಿಸುವ ಬಗ್ಗೆ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಭರವಸೆ ನೀಡಿದ್ದಾರೆ. 

ಕಳೆದ ವಾರ ಹೊನ್ನಾವರ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಮುಖ್ಯಸ್ಥರು ಕಾಂಗ್ರೆಸ್‌ ಮುಖಂಡ ನಿವೇದಿತ್ ಆಳ್ವಾ ಅವರಿಗೆ 2 ನೇ ಮಹಡಿಯಲ್ಲಿರುವ ಡಯಾಲಿಸಿಸ್ ಕೇಂದ್ರಕ್ಕೆ ತೆರಳಲು ಅನೇಕ ರೋಗಿಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ವಿಷಯ ತಿಳಿಸಿದ್ದರು. ಅಲ್ಲದೇ, ಅನಾರೋಗ್ಯ ಪೀಡಿತರಿಗೆ ಅನುಕೂಲವಾಗುವಂತೆ ಲಿಫ್ಟ್ ಸೌಲಭ್ಯ ಒದಗಿಸುವಂತೆ ಮನವಿ ಮಾಡಿಕೊಂಡಿದ್ದರು. 

300x250 AD

ಈ ಪರಿಸ್ಥಿತಿಯನ್ನು ಖುದ್ದಾಗಿ ಅವಲೋಕಿಸಿ ಮನಗಂಡಿದ್ದ ನಿವೇದಿತ್ ಆಳ್ವಾ ಆರೋಗ್ಯ ಸಚಿವ ಶ್ರೀ ದಿನೇಶ ಗುಂಡೂರಾವ್ ಅವರನ್ನು ಭೇಟಿಯಾಗಿ ಲಿಫ್ಟ್‌ನ ಅಗತ್ಯತೆಯನ್ನು ಮನವರಿಕೆ ಮಾಡಿ, ಸರ್ಕಾರದಿಂದ ಲಿಫ್ಟ್ ಸೌಲಭ್ಯ ಮಂಜೂರು ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

Share This
300x250 AD
300x250 AD
300x250 AD
Back to top