Slide
Slide
Slide
previous arrow
next arrow

ಕಬಡ್ಡಿ: ಆನಂದಾಶ್ರಮ ಕಾನ್ವೆಂಟ್ ರಾಜ್ಯ ಮಟ್ಟಕ್ಕೆ

300x250 AD

ಭಟ್ಕಳ: ಇಲ್ಲಿನ ಆನಂದಾಶ್ರಮ ಕಾನ್ವೆಂಟ್ ಶಾಲೆಯ ವಿದ್ಯಾರ್ಥಿಗಳು (14 ವರ್ಷ) ಕಬಡ್ಡಿ ಪಂದ್ಯಾವಳಿಯಲ್ಲಿ ವಿಭಾಗಿಯ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಹಾವೇರಿಯ ಬ್ಯಾಡಗಿಯ ಶ್ರೀಜಗದ್ಗುರು ಜಯದೇವ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯಾವಳಿಯಲ್ಲಿ ಬೆಳಗಾವಿ ತಂಡವನ್ನು 14 ಅಂಕಗಳಿ0ದ ಸೋಲಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸೆಮಿಪೈನಲ್ ಪಂದ್ಯದಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲಾ ತಂಡವನ್ನು ಸೋಲಿಸಿ ಫೈನಲ್ ಹಂತಕ್ಕೆ ಪ್ರವೇಶಿಸಿದ್ದ ಆನಂದಾಶ್ರಮ ಶಾಲೆಯ ವಿದ್ಯಾರ್ಥಿಗಳ ತಂಡ ಸುಲಭವಾಗಿ ಬೆಳಗಾವಿ ತಂಡವನ್ನು ಸೋಲಿಸಿ ಪ್ರಥಮ ಭಾರಿಗೆ ರಾಜ್ಯಮಟ್ಟಕ್ಕೆ ಪ್ರವೇಶಿಸಿತು.

300x250 AD

ಆನಂದಾಶ್ರಮ ಶಾಲೆಯ ವಿದ್ಯಾರ್ಥಿಗಳು ರೈಡಿಂಗ್ ಹಾಗೂ ಕ್ಯಾಚಿಂಗ್‌ನಲ್ಲಿ ಶ್ರೇಷ್ಟ ಸಾಧನೆ ತೋರಿ ರಾಜ್ಯಮಟ್ಟಕ್ಕೆ ಆಯ್ಕೆಯಾದರು. ತಂಡದ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಡಿ.ಮೊಗೇರ, ಶಾಲೆಯ ಮುಖ್ಯೋಪಾಧ್ಯಾಯಿನಿ ಆನಂದಾಶ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಹಾಗೂ ತಂಡದ ತರಬೇತುದಾರರಾದ ಶಿಕ್ಷಕ ಲೀಲಾಧರ ದೇವಾಡಿಗ ಇವರ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ.

Share This
300x250 AD
300x250 AD
300x250 AD
Back to top