• Slide
    Slide
    Slide
    previous arrow
    next arrow
  • ಉಪೇಂದ್ರ ಪೈ ಸೇವಾ ಟ್ರಸ್ಟ್’ನಿಂದ ವಿದ್ಯಾರ್ಥಿಗಳಿಗೆ ಪಠ್ಯ-ಪುಸ್ತಕ ವಿತರಣೆ

    300x250 AD

    ಶಿರಸಿ: ತಾಲೂಕಿನ ನರೇಬೈಲ್‍ನ ಚಂದನ ಆಂಗ್ಲ ಮಾದ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಉಪೇಂದ್ರ ಪೈ ಸೇವಾ ಟ್ರಸ್ಟ್ ವತಿಯಿಂದ ಪಠ್ಯ ಪುಸ್ತಕ ವಿತರಣಾ ಕಾರ್ಯಕ್ರಮ ಜರುಗಿತು.


    ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಮುಖ್ಯ ಅತಿಥಿ ಉಪೇಂದ್ರ ಪೈ ಮಾತನಾಡಿ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಒಳ್ಳೆ ಹವ್ಯಾಸ ಬೆಳೆಸಿಕೊಂಡು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಹಾರೈಸಿದರು.

    300x250 AD


    ಮಿಯಾಡ್ರ್ಸ ಸದಸ್ಯ ಸತೀಶ ಹೆಗಡೆ ಸ್ವಾಗತಿಸಿ ಪರಿಚಯಿಸಿದರು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವನ್ನು ಆಡಳಿತಾಧಿಕಾರಿಣಿ ವಿದ್ಯಾ ನಾಯ್ಕ ವಂದಿಸಿದರು. ಕಾರ್ಯಕ್ರಮದಲ್ಲಿ ಮಿಯಾಡ್ರ್ಸ ಕಾರ್ಯದರ್ಶಿ ಎಲ್ ಎಂ ಹೆಗಡೆ, ಮುಖ್ಯೋಪಾಧ್ಯಾಯರು ಶಿಕ್ಷಕರು ಉಪಸ್ಥಿತರಿದ್ದರು. ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಿಸುವದರೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.

    Share This
    300x250 AD
    300x250 AD
    300x250 AD
    Leaderboard Ad
    Back to top