ಶಿರಸಿ: ಇಲ್ಲಿನ ಮರಾಠಿಕೊಪ್ಪದಲ್ಲಿರುವ ಅಜಿತಮನೋಚೇತನ ಸಂಸ್ಥೆಯಲ್ಲಿ ಸೆ.4, ಶನಿವಾರ ಮಧ್ಯಾಹ್ನ 3.30 ಕ್ಕೆ ಸೋಲಾರ್ ಘಟಕ ಉದ್ಘಾಟನಾ ಸಮಾರಂಭ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸೆಲ್ಕೊ ಇಂಡಿಯಾದ ಸಿ.ಇ.ಒ. ಮೋಹನ ಹೆಗಡೆ ಆಗಮಿಸಲಿದ್ದು, ರಾಜ್ಯ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತಹೆಗಡೆ ಆಶೀಸರ ಪಾಲ್ಗೊಳ್ಳಲಿದ್ದಾರೆ. ಅಜಿತ ಮನೋಚೇತನಾ ಟ್ರಸ್ಟ್ ಅಧ್ಯಕ್ಷ ಸುಧೀರ ಭಟ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದು, ಅಜಿತ ಮನೋಚೇತನಾದ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಈ ಸಂದರ್ಭದಲ್ಲಿ ಸುಸ್ಥಿರ ಇಂಧನ ಅಭಿವೃದ್ಧಿ ಕುರಿತು ವಿಶೇಷ ಸಮಾಲೋಚನಾ ಸಭೆ ನಡೆಯಲಿದ್ದು, ಕಾರ್ಯಕ್ರಮಕ್ಕೆ ಸಹಕಾರಿ ಬ್ಯಾಂಕ್ ಹಾಗು ಗ್ರಾಮೀಣಾಭಿವೃದ್ಧಿ ಸಂಸ್ಥೆಗಳ ಮುಖ್ಯಸ್ಥರು, ಸಹಕಾರಿ ಸಂಘಗಳ ಮುಖ್ಯಸ್ಥರನ್ನುಆಹ್ವಾನಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.