• Slide
    Slide
    Slide
    previous arrow
    next arrow
  • ಸೆ.4 ರಂದು ಅಜಿಮನೋಚತೇನದಲ್ಲಿ ಸೋಲಾರ್ ಘಟಕ ಉದ್ಘಾಟನೆ

    300x250 AD

    ಶಿರಸಿ: ಇಲ್ಲಿನ ಮರಾಠಿಕೊಪ್ಪದಲ್ಲಿರುವ ಅಜಿತಮನೋಚೇತನ ಸಂಸ್ಥೆಯಲ್ಲಿ ಸೆ.4, ಶನಿವಾರ ಮಧ್ಯಾಹ್ನ 3.30 ಕ್ಕೆ ಸೋಲಾರ್ ಘಟಕ ಉದ್ಘಾಟನಾ ಸಮಾರಂಭ ನಡೆಯಲಿದೆ.

    ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸೆಲ್ಕೊ ಇಂಡಿಯಾದ ಸಿ.ಇ.ಒ. ಮೋಹನ ಹೆಗಡೆ ಆಗಮಿಸಲಿದ್ದು, ರಾಜ್ಯ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತಹೆಗಡೆ ಆಶೀಸರ ಪಾಲ್ಗೊಳ್ಳಲಿದ್ದಾರೆ. ಅಜಿತ ಮನೋಚೇತನಾ ಟ್ರಸ್ಟ್‌ ಅಧ್ಯಕ್ಷ ಸುಧೀರ ಭಟ್‌ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದು, ಅಜಿತ ಮನೋಚೇತನಾದ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

    300x250 AD

    ಈ ಸಂದರ್ಭದಲ್ಲಿ ಸುಸ್ಥಿರ ಇಂಧನ ಅಭಿವೃದ್ಧಿ ಕುರಿತು ವಿಶೇಷ ಸಮಾಲೋಚನಾ ಸಭೆ ನಡೆಯಲಿದ್ದು, ಕಾರ್ಯಕ್ರಮಕ್ಕೆ ಸಹಕಾರಿ ಬ್ಯಾಂಕ್ ಹಾಗು ಗ್ರಾಮೀಣಾಭಿವೃದ್ಧಿ ಸಂಸ್ಥೆಗಳ ಮುಖ್ಯಸ್ಥರು, ಸಹಕಾರಿ ಸಂಘಗಳ ಮುಖ್ಯಸ್ಥರನ್ನುಆಹ್ವಾನಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top