Slide
Slide
Slide
previous arrow
next arrow

ಪರಿಸರ ಸ್ನೇಹಿ ಸುಡುಮದ್ದುಗಳ ಪ್ರದರ್ಶನಕ್ಕೆ ಅವಕಾಶ

300x250 AD

ದಾಂಡೇಲಿ: ಬಂಗೂರುನಗರದ ಡಿಲೆಕ್ಸ್ ಮೈದಾನದಲ್ಲಿ ವೆಸ್ಟ್ಕೋಸ್ಟ್ ಕಾಗದ ಕಾರ್ಖಾನೆಯ ಆಶ್ರಯದಡಿ ನಡೆಯಲಿರುವ ರಾಮಲೀಲೊತ್ಸವ ಕಾರ್ಯಕ್ರಮದಲ್ಲಿ ಪರಿಸರ ಸ್ನೇಹಿ ಸುಡುಮದ್ದುಗಳ ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅನುಮತಿ ನೀಡಿದ್ದಾರೆ.

ಪರಿಸರ ಸ್ನೇಹಿ ಸುಡುಮದ್ದುಗಳ ಪ್ರದರ್ಶನಕ್ಕೆ ನಿಯಮಾವಳಿಯ ಪ್ರಕಾರ ಅವಕಾಶವನ್ನು ನೀಡಲಾಗಿದೆ. ಈ ಬಗ್ಗೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ತಹಶೀಲ್ದಾರರಿಗೆ ಸೂಚನೆಯನ್ನು ನೀಡಲಾಗಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ರಾಮಲೀಲೋತ್ಸವ ಕಾರ್ಯಕ್ರಮವನ್ನು ನೋಡಲು 40ರಿಂದ 50 ಸಾವಿರ ಜನ ಆಗಮಿಸುತ್ತಿದ್ದು, ಸುಡುಮದ್ದುಗಳ ಪ್ರದರ್ಶನವೇ ಈ ಕಾರ್ಯಕ್ರಮದ ವಿಶೇಷ. ಈ ಬಾರಿ ಸುಡು ಮದ್ದುಗಳ ಪ್ರದರ್ಶನಕ್ಕೆ ಅವಕಾಶ ಇಲ್ಲ ಎನ್ನುವುದರ ಬಗ್ಗೆ ಮಾಹಿತಿಯನ್ನು ಪಡೆದುಕೊಂಡ ಶಾಸಕ ಆರ್.ವಿ.ದೇಶಪಾಂಡೆ ಅವರು ಜಿಲ್ಲಾಧಿಕಾರಿಯವರ ಜೊತೆ ಮಾತುಕತೆಯನ್ನು ನಡೆಸಿ, ಸರಕಾರದ ಗಮನಕ್ಕೆ ತಂದು ಪರಿಸರ ಸ್ನೇಹಿ ಸುಡುಮದ್ದುಗಳ ಪ್ರದರ್ಶನಕ್ಕೆ ಅವಕಾಶ ಒದಗಿಸಿಕೊಟ್ಟಿದ್ದಾರೆ.

300x250 AD

ಈ ನಿಟ್ಟಿನಲ್ಲಿ ದಾಂಡೇಲಿ ಜನತೆಯ ಬೇಡಿಕೆಯ ಅನುಸಾರವಾಗಿ ಪರಿಸರ ಸ್ನೇಹಿ ಸುಡುಮದ್ದುಗಳ ಪ್ರದರ್ಶನದ ಕುರಿತಂತೆ ತಹಶೀಲ್ದಾರ್ ಶೈಲೇಶ್ ಪರಮಾನಂದ ಅವರು ಕೂಡ ಜಿಲ್ಲಾಧಿಕಾರಿಯವರ ಗಮನ ಸೆಳೆದಿದ್ದರು. ಸುಡುಮದ್ದುಗಳ ಪ್ರದರ್ಶನಕ್ಕೆ ಅನುಮತಿಯನ್ನು ಕೊಡಿಸುವಂತೆ ದೇಶಪಾಂಡೆಯವರಿಗೆ ವೆಸ್ಟ್ಕೋಸ್ಟ್ ಕಾಗದ ಕಾರ್ಖಾನೆ, ನಗರಸಭೆಯ ಸದಸ್ಯರಾದ ಮೋಹನ್ ಹಲವಾಯಿ, ಕಾಂಗ್ರೆಸ್ ಮುಖಂಡರುಗಳಾದ ವಿಷ್ಣುಮೂರ್ತಿ ರಾವ್, ರಾಘವೇಂದ್ರ ಶೆಟ್ಟಿ, ಕರವೇ ಘಟಕ ಮನವಿ ಮಾಡಿಕೊಂಡಿತ್ತು.

Share This
300x250 AD
300x250 AD
300x250 AD
Back to top