Slide
Slide
Slide
previous arrow
next arrow

ಸೆ. 20ರವರೆಗೆ ಡಿಪ್ಲೋಮಾ ಕೋರ್ಸ್ ದಾಖಲಾತಿ; ಅಶ್ವತ್ಥ್ ನಾರಾಯಣ

300x250 AD

ಬೆಂಗಳೂರು: ರಾಜ್ಯದಲ್ಲಿ 2021 – 22 ನೇ ಸಾಲಿನ ಡಿಪ್ಲೊಮಾ ಕೋರ್ಸ್‌ಗಳ ಪ್ರಥಮ ಸೆಮಿಸ್ಟರ್ ದಾಖಲಾತಿ‌ಗೆ ಮೊದಲು ಬಂದವರಿಗೆ ಆದ್ಯತೆ ನೀಡಲಾಗುತ್ತಿದ್ದು, ಸೆ.20 ರ ವರೆಗೆ ದಾಖಲಾತಿ ಕಾರ್ಯಗಳು ನಡೆಯಲಿವೆ ಎಂದು ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.

ರಾಜ್ಯದ 62 ಸರ್ಕಾರಿ, 34 ಅನುದಾನಿತ ಪಾಲಿಟೆಕ್ನಿಕ್‌ಗಳಲ್ಲಿ ಪ್ರವೇಶಾತಿಯನ್ನು ಸೆ. 20 ರ ವರೆಗೆ ಸಂಜೆ ಕಚೇರಿಯ ಅವಧಿಯ ವರೆಗೂ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಇದರ ಅನುಕೂಲ‌ವನ್ನು ಸದ್ವಿನಿಯೋಗ ಮಾಡಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

300x250 AD

ರಾಜ ಯದ ಎಲ್ಲಾ ಪಾಲಿಟೆಕ್ನಿಕ್‌ಗಳ ಪ್ರಾಂಶುಪಾಲ‌ರು ವಿದ್ಯಾರ್ಥಿಗಳ ದಾಖಲಾತಿ ಅವಧಿಯನ್ನು ವಿಸ್ತರಣೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಸೆ. 20 ರ ವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

Share This
300x250 AD
300x250 AD
300x250 AD
Back to top