Slide
Slide
Slide
previous arrow
next arrow

ನ.4ರಿಂದ ದತ್ತಪೀಠ, ಮುಳ್ಳಯ್ಯನಗಿರಿಗೆ ಪ್ರವಾಸಿಗರಿಗೆ ನಿರ್ಬಂಧ: ಇಲ್ಲಿದೆ ಮಾಹಿತಿ

300x250 AD

ಚಿಕ್ಕಮಗಳೂರು: ಶ್ರೀರಾಮ ಸೇನೆಯ ದತ್ತಮಾಲ ಅಭಿಯಾನದ ಹಿನ್ನೆಲೆಯಲ್ಲಿ ನವೆಂಬರ್ 4 ರಿಂದ 6ರವೆಗೆ ದತ್ತಪೀಠ ಹಾಗೂ ಮುಳ್ಳಯ್ಯನಗಿರಿ ಭಾಗದ ತಾಣಗಳಿಗೆ ಪ್ರವಾಸಿಗರ ಭೇಟಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ನವೆಂಬರ್ ಮೊದಲ ವಾರದ ವೀಕೆಂಡ್‌ನಲ್ಲಿ ಗಿರಿ ಪ್ರದೇಶಕ್ಕೆ ಪ್ರವಾಸದ ಹಮ್ಮಿಕೊಳ್ಳುವ ಯೋಜನೆ ಇದ್ದರೆ ಬದಲಿಸಿಕೊಳ್ಳುವುದು ಸೂಕ್ತವಾಗಿದ್ದು, ನವೆಂಬರ್ 4ರ ಬೆಳಗ್ಗೆ 6 ಗಂಟೆಯಿಂದ ನವೆಂಬರ್ 6ರ ಬೆಳಗ್ಗೆ 10 ಗಂಟೆಯವರೆಗೆ ಗಿರಿ ಭಾಗಕ್ಕೆ ಪ್ರವಾಸಿಗರು ಬರುವುದಕ್ಕೆ ನಿಷೇಧವಿದೆ.

ಹೊನ್ನಮ್ಮನಹಳ್ಳ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ದತ್ತಪೀಠ, ಮಾಣಿಕ್ಯಧಾರ, ಗಾಳಿಕೆರೆ ಪ್ರದೇಶಗಳಿಗೆ ನಿರ್ಬಂಧ ವಿಧಿಸಲಾಗಿದೆ. ಇದೇ ವೇಳೆ ದತ್ತಮಾಲಾ ಅಭಿಯಾನದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹಾಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ ಅಮಟೆ ಅವರು ದತ್ತಪೀಠಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ಸಹ ನಡೆಸಿದ್ದಾರೆ.

300x250 AD

Share This
300x250 AD
300x250 AD
300x250 AD
Back to top