ಕುಮಟಾ: ತಾಲೂಕಿನ ಅಘನಾಶಿನಿ ಕಾಮೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಆರಾಧನಾ ಯೋಜನೆಯಡಿ 1 ಲಕ್ಷ ರೂ. ಹಾಗೂ ಗುಂದದ ಶ್ರೀ ದುರ್ಗಾದೇವಿ ದೇವಸ್ಥಾನ ಜೀರ್ಣೋದ್ದಾರಕ್ಕೆ 50 ಸಾವಿರ ರೂ.ಗಳ ಚೆಕ್ನ್ನು ಶಾಸಕ ದಿನಕರ ಶೆಟ್ಟಿ ಆಡಳಿತ ಮಂಡಳಿ ಸದಸ್ಯರಿಗೆ ವಿತರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಪ್ರಮುಖರು ಹಾಗೂ ಪದಾಧಿಕಾರಿಗಳು ಇದ್ದರು.