Slide
Slide
Slide
previous arrow
next arrow

ಕ್ರೀಡಾಕೂಟ: ಶ್ರೀನಿಕೇತನ ವಿದ್ಯಾರ್ಥಿ ರಾಷ್ಟ್ರಮಟ್ಟಕ್ಕೆ ಆಯ್ಕೆ

300x250 AD

ಶಿರಸಿ: ರಾಜ್ಯಮಟ್ಟದ ಸಿ.ಬಿ.ಎಸ್.ಇ. ಕ್ಲಸ್ಟರ್ ಕ್ರೀಡಾಕೂಟದಲ್ಲಿ ಭಾಗವಹಿಸಿದ ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀನಿಕೇತನ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಕು. ಅಖಿಲ್ ಕಂಚುಗಾರ್ ತ್ರಿವಿಧ ಜಿಗಿತದಲ್ಲಿ ಬೆಳ್ಳಿ ಪದಕವನ್ನು ಗೆಲ್ಲುವ ಮೂಲಕ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾನೆ.

8ನೇ ತರಗತಿಯ ಕುಮಾರಿ. ಶ್ರಾವಣಿ ನಾಯ್ಕ ಉದ್ದ ಜಿಗಿತದಲ್ಲಿ 4ನೇ ಸ್ಥಾನ ಮತ್ತು 10ನೇ ತರಗತಿಯ ಕುಮಾರಿ. ಸಿಂಚನಾ ಯು.ಕೆ. ಚಕ್ರ ಎಸೆತ ಕ್ರೀಡೆಯಲ್ಲಿ 5ನೇ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿದ್ದು, ವಿದ್ಯಾರ್ಥಿಗಳಿಗೆ ಶಾಲೆಯ ದೈಹಿಕ ಶಿಕ್ಷಕರಾದ ಸಂತೋಷ ಸಾಲೇರ್ ಹಾಗೂ ಬಸವರಾಜ ಹೊಸಮನಿ ಮಾರ್ಗದರ್ಶನ ನೀಡಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಪ್ರಾಂಶುಪಾಲರು, ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕರು ಹಾಗೂ ಪಾಲಕರು ಸಂತಸ ವ್ಯಕ್ತಪಡಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top