Slide
Slide
Slide
previous arrow
next arrow

ಮನನೊಂದ ವ್ಯಕ್ತಿ ನೇಣಿಗೆ ಶರಣು

300x250 AD

ಭಟ್ಕಳ: ಇಲ್ಲಿನ ಕೋಟೇಶ್ವರ ನಗರದ ಹರಿಜನಕೇರಿಯಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತ ವ್ಯಕ್ತಿಯನ್ನು ರಮೇಶ ಮುತ್ತುಗೋಪಾಲ ಹರಿಜನ (45)ಎಂದು ತಿಳಿದು ಬಂದಿದ್ದು, ಈತ ಪುರಸಭೆಯಲ್ಲಿ ಪೌರ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದನು. ಕಳೆದ ಒಂದು ವಾರದ ಹಿಂದೆ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಮನೆಯವರೊಂದಿಗೆ ಸರಿಯಾಗಿ ಮಾತನಾಡದೇ ತನ್ನಷ್ಟಕ್ಕೆ ತಾನೇ ಇದ್ದಿದ್ದರೆಂದು ತಿಳಿದುಬಂದಿದೆ. ಮನೆಯಲ್ಲಿ ಯಾರೂ ಇಲ್ಲದಿರುವ ಸಮಯದಲ್ಲಿ ಲುಂಗಿಯಿಂದ ಮನೆಯ ಪಕಾಸಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಕುರಿತು ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

300x250 AD

Share This
300x250 AD
300x250 AD
300x250 AD
Back to top