Slide
Slide
Slide
previous arrow
next arrow

ನಗರ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗೆ ಅರ್ಜಿ ಆಹ್ವಾನ

300x250 AD

ಕಾರವಾರ: ಪ್ರಸಕ್ತ ಸಾಲಿಗೆ ನಗರ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳು ಕಾರವಾರ ತಾಲೂಕಿನ ಕಡವಾಡ ಗ್ರಾಮ ಪಂಚಾಯತಿ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ತಲಾ 1 ಹುದ್ದೆ ಖಾಲಿ ಇದ್ದು, ಈ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ದೈಹಿಕ ವಿಕಲಚೇತನರಾಗಿದ್ದು, ನಡೆದಾಡಲು ಸಮರ್ಥರಿರುವ, ಕನಿಷ್ಠ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯನ್ನು ಹೊಂದಿದ್ದು, 18 ರಿಂದ 45 ವಯೋಮಿತಿಯವರಾಗಿರಬೇಕು. ನ.9 ರೊಳಗೆ ನಿಗದಿತ ನಮೂನೆಯ ಅರ್ಜಿ ಫಾರಂನ್ನು ಕಾರವಾರ ತಾಲೂಕಿನ ನೋಡಲ್ ಅಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಹಾಗೂ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಿ ಪಡೆಯಬಹುದು.

300x250 AD

ಹೆಚ್ಚಿನ ಮಾಹಿತಿಗಾಗಿ ದುರವಾಣಿ ಸಂಖ್ಯೆ: tel:+918217693255 ಗೆ ಸಂಪರ್ಕಿಸಬಹುದು ಎಂದು ಕಾರವಾರದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This
300x250 AD
300x250 AD
300x250 AD
Back to top