Slide
Slide
Slide
previous arrow
next arrow

ಶ್ರೀದಾಂಡೇಲಪ್ಪ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಉತ್ತಮ ಸಹಕಾರಿ ಸಂಘ ಪ್ರಶಸ್ತಿಯ ಗರಿ

300x250 AD

ದಾಂಡೇಲಿ : ಜಿಲ್ಲೆಯ ಸಹಕಾರಿ ಸಂಘಗಳ ಮಧ್ಯವರ್ತಿ ಬ್ಯಾಂಕ್ ಆಗಿರುವ ಕೆಡಿಸಿಸಿ ಬ್ಯಾಂಕ್ ಕೊಡ ಮಾಡುವ ಉತ್ತಮ ಸೇವಾ ಸಹಕಾರಿ ಸಂಘ ಪ್ರಶಸ್ತಿಗೆ ದಾಂಡೇಲಿಯ ಶ್ರೀದಾಂಡೇಲಪ್ಪ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘವು ಆಯ್ಕೆಯಾಗಿದೆ.

ನ.16 ರಂದು ಶಿರಸಿಯ ತೋಟಗಾರ್ಸ್ ಕೋ-ಆಪರೇಟಿವ್ ಸೊಸೈಟಿ ಆವರಣದಲ್ಲಿ ನಡೆಯಲಿರುವ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದ ಸಂದರ್ಭದಲ್ಲಿ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ.

300x250 AD

ಕಳೆದ 63 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಶ್ರೀದಾಂಡೇಲಪ್ಪ ಕೃಷಿ ಪತ್ತಿನ ಸಹಕಾರಿ ಸಂಘವು ದಾಂಡೇಲಿ ತಾಲೂಕಿನ ರೈತಾಪಿ ವರ್ಗದ ಜೀವನಾಡಿಯಾಗಿ ಕಾರ್ಯನಿರ್ವಹಿಸುತ್ತಾ ಬಂದಿದ್ದು, ಕೆಡಿಸಿಸಿ ಬ್ಯಾಂಕ್ ನೀಡುವ ಪ್ರಶಸ್ತಿಗೆ ಸತತ ಭಾಜನವಾಗುವುದರ ಜೊತೆಗೆ ರಾಜ್ಯ ಅಪೇಕ್ಸ್ ಬ್ಯಾಂಕಿನ ಪ್ರಶಸ್ತಿಯ ಗೌರವಕ್ಕೂ ಪಾತ್ರವಾಗಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

Share This
300x250 AD
300x250 AD
300x250 AD
Back to top