Slide
Slide
Slide
previous arrow
next arrow

ಜಿಲ್ಲಾಮಟ್ಟದ ಕ್ರೀಡಾಕೂಟ: ಪೂರ್ಣಪ್ರಜ್ಞ ಪ್ರೌಢಶಾಲೆ ವಿದ್ಯಾರ್ಥಿ ಸಾಧನೆ

300x250 AD

ಅಂಕೋಲಾ: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ ತಾಲೂಕಿನ ಪೂರ್ಣಪ್ರಜ್ಞ ಪ್ರೌಢಶಾಲೆಯ ವಿದ್ಯಾರ್ಥಿ ವಿಘ್ನೇಶ್ವರ ಮಂಜುನಾಥ ನಾಯ್ಕ ಗುಂಡು ಎಸೆತದಲ್ಲಿ ಪ್ರಥಮ, ಚಕ್ರ ಎಸೆತದಲ್ಲಿ ಪ್ರಥಮ ಹಾಗೂ ಈಟಿ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ಪುತ್ತೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿದ್ದಾನೆ.

ಉತ್ತಮ ಕ್ರೀಡಾಪಟು ಆಗಿರುವ ವಿಶ್ವೇಶ್ವರ ನಾಯ್ಕ ತಾಲೂಕಿನ ಸಾಮಾಜಿಕ ಕಾರ್ಯಕರ್ತ, ಉತ್ಸಾಹಿ ಯುವಕ, ಕ್ರಿಕೆಟ್ ಆಟಗಾರ ಮಂಜುನಾಥ ವಿ ನಾಯ್ಕ ಅವರ ಪುತ್ರನಾಗಿದ್ದಾನೆ.
ವಿಘ್ನೇಶ್ವರ ನಾಯ್ಕ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯಾಧ್ಯಾಪಕರು,ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸದಸ್ಯರು ಅಭಿನಂದನೆಗಳನ್ನು ಸಲ್ಲಿಸಿ ಮುಂದಿನ ಹಂತದಲ್ಲಿ ಅತ್ಯುತ್ತಮ ಸಾಧನೆ ಮಾಡುವಂತೆ ಹಾರೈಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top