Slide
Slide
Slide
previous arrow
next arrow

ನ.18ಕ್ಕೆ ಅರಣ್ಯಾಧಿಕಾರಿಯೊಂದಿಗೆ ಅರಣ್ಯವಾಸಿಗಳ ಚರ್ಚೆ

300x250 AD

ಕುಮಟಾ: ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ಕತಗಾಲ್ ವಲಯ ಅರಣ್ಯಾಧಿಕಾರಿಯೊಂದಿಗೆ ಚರ್ಚೆ ಹಾಗೂ ಕಸ್ತೂರಿ ರಂಗನ್ ವರದಿ ವಿರೋಧ ಆಕ್ಷೇಪಣಾ ಪತ್ರ ಸಲ್ಲಿಸುವ ಕುರಿತು ಕುಮಟ ತಾಲೂಕಿನ ಅಳಕೋಡ(ಕತಗಾಲ್) ಗ್ರಾಮ ಪಂಚಾಯತದಲ್ಲಿ ನ.18, ಮಧ್ಯಾಹ್ನ 2.30 ಕ್ಕೆ ಸಭೆ ಕರೆಯಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಕಸ್ತೂರಿ ರಂಗನ್ ವರದಿಗೆ ಆಕ್ಷೇಪಣೆ ಸಲ್ಲಿಸುವಂತಹ ಹಾಗೂ ಅರಣ್ಯವಾಸಿಗಳ ಸಮಸ್ಯೆಗಳ ಬಗ್ಗೆ ಆಸಕ್ತ ಇರುವಂತಹ ಅರಣ್ಯವಾಸಿಗಳು ಕತಗಾಲ್ ಗಣೇಶೋತ್ಸವ ಸಭಾಂಗಣದಲ್ಲಿ ಹಾಜರಿರಲು ಅವರು ಕೋರಿದ್ದಾರೆ.

300x250 AD

Share This
300x250 AD
300x250 AD
300x250 AD
Back to top