Slide
Slide
Slide
previous arrow
next arrow

ಕಾರು-ಟ್ಯಾಂಕರ್ ಡಿಕ್ಕಿ: ನಾಲ್ವರಿಗೆ ಗಾಯ

300x250 AD

ಅಂಕೋಲಾ: ತಾಲೂಕಿನ ರಾಮನಗುಳಿ ಬಳಿ ಕಾರು ಮತ್ತು ಟ್ಯಾಂಕರ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ಗಾಯಗಳಾದ ಘಟನೆ ನಡೆದಿದೆ.

ವಿಜಯ ಶ್ರೀನಾಥ ಶೆಟ್ಟಿ, ಜಗದೀಶ ಶೆಟ್ಟಿ, ಅರುಣ ಶೆಟ್ಟಿ, ಮೇದಾ ಶೆಟ್ಟಿ ಎಂಬುವವರಿಗೆ ಗಾಯಗಳಾಗಿದೆ. ಯಲ್ಲಾಪುರ ಮಾರ್ಗದಿಂದ ಅಂಕೋಲಾ ಕಡೆ ಬರುತ್ತಿದ್ದ ಟ್ಯಾಂಕರ್ ಚಾಲಕನ ನಿರ್ಲಕ್ಷ್ಯ ಚಾಲನೆಯಿಂದ ಉಡುಪಿಯಿಂದ ಪುಣಾಕ್ಕೆ ಹೋಗುವ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ. ಅಪಘಾತ ನಡೆದ ತಕ್ಷಣ ಆ ಮಾರ್ಗದಲ್ಲಿ ಹೊಗುತ್ತಿದ್ದ ಸಾಮಾಜಿಕ ಕಾರ್ಯಕರ್ತ ಗಣಪತಿ ಮೂಲೆಮನೆ ಆಂಬ್ಯುಲೆನ್ಸ್ ಬರಲು ಕಾಯದೆ ತನ್ನ ಕಾರಿನಲ್ಲಿಯೇ ಗಾಯಾಳುಗಳನ್ನು ಅಂಕೋಲಾ ತಾಲೂಕಾಸ್ಪತ್ರೆಗೆ ಸಾಗಿಸಿ ಮಾನವಿಯತೆ ಮೆರೆದಿದ್ದಾರೆ.
ಗಾಯಾಳುಗಳಿಗೆ ಅಂಕೋಲಾ ತಾಲೂಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಉಡುಪಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

300x250 AD
Share This
300x250 AD
300x250 AD
300x250 AD
Back to top