Slide
Slide
Slide
previous arrow
next arrow

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕುರಿತು ಅಧಿವೇಶನದಲ್ಲಿ ಚರ್ಚಿಸುವಂತೆ ಒತ್ತಾಯ

300x250 AD

ಕುಮಟಾ: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹಾಗೂ ಕುಮಟಾದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಮತ್ತು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕುರಿತಂತೆ ವಿಷಯ ಪ್ರಸ್ತಾಪಿಸುವಂತೆ ಶಾಸಕ ದಿನಕರ ಶೆಟ್ಟಿ ಅವರಿಗೆ ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ಮನವಿ ಸಲ್ಲಿಸಿದರು.

ಶಾಸಕ ದಿನಕರ ಶೆಟ್ಟಿ ಅವರ ಗೃಹದಲ್ಲಿ ಭೇಟಿಯಾದ ಅನಂತಮೂರ್ತಿ ಹೆಗಡೆ, ಶಾಸಕರಿಗೆ ಮನವಿ ಸಲ್ಲಿಸಿ, ತಾವು ಕಳೆದ ಅವಧಿಯಲ್ಲಿ ಶಾಸಕರಾಗಿದ್ದ ಸಂದರ್ಭದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ಬಗ್ಗೆ ತಮ್ಮ ಸರ್ಕಾರದ ಗಮನ ಸೆಳೆದು, ಆಸ್ಪತ್ರೆ ಮಂಜೂರಾತಿ ಮಾಡಿಸಿದ ತಮ್ಮ ಪ್ರಯತ್ನ ಶ್ಲಾಘನೀಯ. ಅಂದಿನ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಕುಮಟಾಗೆ ಆಗಮಿಸಿ ಸ್ಥಳ ವೀಕ್ಷಣೆ ಮಾಡಿ ಎಲ್ಲ ರೀತಿಯಲ್ಲೂ ಮಂಜೂರಾತಿ ನೀಡಿದ್ದರು. ಆದರೆ ಹೊಸ ಸರ್ಕಾರ ಬಂದ ನಂತರ ಈ ಪ್ರಕ್ರಿಯೆ ಸಂಪೂರ್ಣ ಸ್ಥಗಿತವಾಗಿದ್ದು ದುರದೃಷ್ಟಕರ. ನ. 27 ರಿಂದ ಡಿಸೆಂಬರ್ 3 ರವರೆಗೆ ಶಿರಸಿಯ ತಹಸೀಲ್ದಾರ ಕಚೇರಿ‌ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ಮಾಡುತ್ತಿದ್ದೇವೆ.‌ ನಂತರ ಡಿ.4 ರಂದು ಕರ್ನಾಟಕ ಸರ್ಕಾರದ ಚಳಿಗಾಲದ ಅಧೀವೇಶನ ನಡೆಯುವ ಬೆಳಗಾವಿಯ ಸುವರ್ಣಸೌಧದ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಿ, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ ಮಾಡಲು ಇಚ್ಚಿಸಿದ್ದೇವೆ ಎಂದ ಅವರು, ಈ ನಿಟ್ಟಿನಲ್ಲಿ ತಾವು ಅಧಿವೇಶನದಲ್ಲಿ ಈ ಬಗ್ಗೆ ವಿಷಯ ಪ್ರಸ್ತಾಪಿಸಿ, ಸರ್ಕಾರದ ಗಮನ ಸೆಳೆದು, ಈ ಪ್ರಕ್ರಿಯೆಗೆ ಮತ್ತೆ ಮರು ಚಾಲನೆ ನೀಡಲು ಸರ್ಕಾರವನ್ನು ಒತ್ತಾಯಿಸುವಂತೆ ಮನವಿ ಮಾಡಿದರು.

300x250 AD

ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ದಿನಕರ ಶೆಟ್ಟಿ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ವಿಷಯ ಪ್ರಸ್ತಾಪಿಸಿ, ಸರ್ಕಾರದ ಗಮನ ಸೆಳೆಯುವಲ್ಲಿ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಪರಮಾನಂದ ಹೆಗಡೆ, ಸಂತೋಷ ನಾಯ್ಕ ಬ್ಯಾಗದ್ದೆ ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top