Slide
Slide
Slide
previous arrow
next arrow

ಬಿಜೆಪಿ ಗೆಲುವು : ಶಿರಸಿಯಲ್ಲಿ ವಿಜಯೋತ್ಸವ ಆಚರಣೆ

300x250 AD

ಶಿರಸಿ: ರಾಜಸ್ಥಾನ, ಮಧ್ಯಪ್ರದೇಶ, ಛತ್ತಿಸಗಡ ಸೇರಿದಂತೆ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿಯ ಅಭೂತಪೂರ್ವ ಯಶಸ್ಸಿನ ಹಿನ್ನೆಲೆಯಲ್ಲಿ ಶಿರಸಿ ನಗರದಲ್ಲಿ ಭಾನುವಾರ ವಿಜಯೋತ್ಸವ ಆಚರಿಸಲಾಯಿತು.

ಪಂ.ದೀನದಯಾಳ ಭವನದಲ್ಲಿ ನಡೆದ ಸಭೆಯಲ್ಲಿ ಪ್ರಾಸ್ತಾವಿಕವಾಗಿ ನಗರ ಮಂಡಲದ ಅಧ್ಯಕ್ಷರು ಮಾತನಾಡಿದರು. ಜಿಲ್ಲಾ ಸಹ ಮಾಧ್ಯಮ ವಕ್ತಾರ ಸದಾನಂದ ಭಟ್ಟ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರು ಎಸಳೆ ವಿಜಯೋತ್ಸವದ ಕುರಿತು ಮಾತನಾಡಿದರು. ಸಭೆಯಲ್ಲಿ ಉಪಸ್ಥಿತರಿದ್ದ ಮಾಜಿ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಮೋದಿಯವರಿದ್ದರೆ ಎಲ್ಲವೂ ಸಾಧ್ಯ ಎಂಬಂತೆ ಜನತೆ ಮತದಾನ ಮಾಡಿದ್ದಾರೆ ಎಂದು ತಿಳಿಸಿದರು.

300x250 AD

ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಉಷಾ ಹೆಗಡೆ, ಗುರುಪ್ರಸಾದ ಹೆಗಡೆ, ನಗರ ಸಭಾ ಸದಸ್ಯರು, ವಿವಿಧ ಸ್ಥರದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

Share This
300x250 AD
300x250 AD
300x250 AD
Back to top