Slide
Slide
Slide
previous arrow
next arrow

ಹಳಿಯಾಳದಲ್ಲಿ ಪ್ರತ್ಯೇಕ ಎರಡು ಅಪಘಾತ : ಇಬ್ಬರ ಧಾರುಣ ಸಾವು

300x250 AD

ಹಳಿಯಾಳ: ತಾಲೂಕಿನಲ್ಲಿ ಒಂದೇ ದಿನ ಎರಡು ಪ್ರತ್ಯೇಕ ಅಪಘಾತಗಳು ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ತಾಲೂಕಿನ ಕಾಳಗಿನಕೊಪ್ಪ ಗ್ರಾಮದ ಯುವಕ ಮಂಜುನಾಥ ಇಂಗಳಗಿ (23) ಎನ್ನುವಾತ ಕಾಳಗಿನಕೊಪ್ಪ ಗ್ರಾಮದಿಂದ ಮುರ್ಕವಾಡಕ್ಕೆ ತೆರಳುವ ರಸ್ತೆ ಮಧ್ಯೆ ಬೆಳಗಿನ ಜಾವ ವಾಕಿಂಗ್ ತೆರಳಿದ ಸಂದರ್ಭದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಯುವಕ ಮೃತಪಟ್ಟಿದ್ದಾನೆ. ಇನ್ನು, ಅಪಘಾತಕ್ಕೆ ಕಾರಣವಾದ ವಾಹನ ಸವಾರ ತನ್ನ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ.

ಇನ್ನು, ಪಟ್ಟಣದ ಪೋಲಿಸ್ ಠಾಣೆಯ ಹತ್ತಿರದ ಟ್ರಾಕ್ಟರ್ ರಿಪೇರಿ ಗ್ಯಾರೆಜ್‌ನಲ್ಲಿ ಅವಘದ ಸಂಭವಿದೆ.

300x250 AD

ಮೆಕ್ಯಾನಿಕ್ ಶಿವಮೊಗ್ಗ ಮೂಲದ ಹಬಿಬ್ ಖಾನ್ ಪಠಾನ್(52) ಟ್ರಾಕ್ಟರ್ ರಿಪೇರಿ ಮಾಡುವ ಸಂದರ್ಭದಲ್ಲಿ ಒಮ್ಮೆಲೇ ಸ್ಟಾರ್ಟ್ ಆಗಿ ಹಬಿಬ್ ಮೇಲೆ ಹರಿದು, ಮುಂದಿರುವ ಕಂಪೌಂಡ್ ಗೋಡೆ ಒಡೆದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು, ಬಳಿಕ ಇನ್ನೊಂದು ಟ್ರಾಕ್ಟರ್ ಟ್ರೇಲರ್‌ಗೆ ಡಿಕ್ಕಿ ಹೊಡೆದು ನಿಂತಿದೆ. ಘಟನೆಯಲ್ಲಿ ಹಬಿಬ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಘಟನಾ ಸ್ಥಳಕ್ಕೆ ಹಳಿಯಾಳ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಪಘಾತದ ವಿಡಿಯೋ ಸಿಸಿ ಟಿವಿ ಕ್ಯಾಮೇರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಹಳಿಯಾಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This
300x250 AD
300x250 AD
300x250 AD
Back to top