Slide
Slide
Slide
previous arrow
next arrow

ಜಿಲ್ಲೆಯಲ್ಲಿ ಸದ್ದಿಲ್ಲದೇ ಹೆಚ್ಚುತ್ತಿದೆ ಕ್ಯಾನ್ಸರ್ ಪ್ರಕರಣಗಳು: ವರ್ಷದೊಳಗೆ 225ಕ್ಕೂ ಅಧಿಕ ಪ್ರಕರಣ ಪತ್ತೆ

300x250 AD

ಕಾರವಾರ: ಮಾರಕ ಕ್ಯಾನ್ಸರ್ ರೋಗ ಜಿಲ್ಲೆಯಲ್ಲಿ ಸದ್ದಿಲ್ಲದೇ ಹೆಚ್ಚುತ್ತಿದೆ. ಕಳೆದ ಜನವರಿಯಿಂದ ಈವರೆಗೆ ಕಾರವಾರದ ಜಿಲ್ಲಾ ಆಸ್ಪತ್ರೆಯೊಂದರಲ್ಲಿಯೇ ಸುಮಾರು 225ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿದ್ದು ಪ್ರತಿ ತಿಂಗಳು ಕ್ಯಾನ್ಸರ್ ತುತ್ತಾಗುವವರ ಸಂಖ್ಯೆ ಏರುತ್ತಲೇ ಇದೆ.

ಕ್ಯಾನ್ಸರ್ ಮಾರಕ ಖಾಯಿಲೇ ಎಂದೇ ಹೇಳಲಾಗುತ್ತದೆ. ಒಮ್ಮೆ ಕ್ಯಾನ್ಸರ್ ಗೆ ತುತ್ತಾದರೆ ಯಾವುದೇ ರೋಗಿ ಸ್ವಲ್ಪ ನಿರ್ಲಕ್ಷ ತೋರಿದರು ಸಾವು ಸಂಭವಿಸುವುದೇ ಹೆಚ್ಚು. ಇಂತಹ ಮಾರಕ ಖಾಯಿಲೆ ಸದ್ಯ ಜಿಲ್ಲೆಯಲ್ಲಿ ಪ್ರತಿ ತಿಂಗಳು ಏರುತ್ತಲೇ ಇದ್ದು ಇದಕ್ಕೆ ಕಾರಣ ಏನು ಅನ್ನುವುದು ಮಾತ್ರ ಕುತೂಹಲವಾಗಿದೆ.

ಜಿಲ್ಲಾ ಆಸ್ಪತ್ರೆಯಲ್ಲಿಯೇ ಚಿಕಿತ್ಸೆಗೆಂದು ಬಂದು ಪರೀಕ್ಷೆಗೊಳಪಟ್ಟು ಕ್ಯಾನ್ಸರ್ ಎಂದು ಧೃಡಪಟ್ಟವರ ಸಂಖ್ಯೆಯಿಂದ ಕಳೆದ ಜನವರಿಯಿಂದ ಈ ವರೆಗೆ 225ಕ್ಕೂ ಅಧಿಕ ಪ್ರಕರಣಗಳಾಗಿದೆ. ಕಳೆದ ಜನವರಿಯಲ್ಲಿ 24 ಪ್ರಕರಣ ಪತ್ತೆಯಾದರೆ, ಫೆಭ್ರವರಿಯಲ್ಲಿ 48, ಮಾರ್ಚ್ ನಲ್ಲಿ 17, ಏಪ್ರಿಲ್ ನಲ್ಲಿ 17, ಮೇ ನಲ್ಲಿ 25, ಜೂನ್ ನಲ್ಲಿ25, ಜುಲೈ ನಲ್ಲಿ 18, ಆಗಸ್ಟ್ ನಲ್ಲಿ 20, ಸೆಪ್ಟೆಂಬರ್ ನಲ್ಲಿ 25, ಅಕ್ಟೋಬರ್ ನಲ್ಲಿ 11 ಹಾಗೂ ನವೆಂಬರ್ ನಲ್ಲಿ 17 ಪ್ರಕರಣ ಪತ್ತೆಯಾಗಿದೆ.

ಇನ್ನು ಅತಿ ಹೆಚ್ಚೆಂದರೆ ಬ್ರೆಸ್ಟ್ ಕ್ಯಾನ್ಸರ್ ಪ್ರಕರಣಗಳು ಪತ್ತೆಯಾಗಿದೆ. ಕಳೆದ ಜನವರಿಯಿಂದ ಸುಮಾರು 55 ಪ್ರಕರಣ ಬ್ರೆಸ್ಟ್ ಕ್ಯಾನ್ಸರ್ ಎಂದು ಧೃಡಪಟ್ಟಿದ್ದು ಇದರೊಟ್ಟಿಗೆ ತಂಬಾಕು ಸೇವನೆ, ಇನ್ನಿತರ ಕಾರಣದಿಂದ ಕೆಲವರಿಗೆ ಕ್ಯಾನ್ಸರ್ ಬಂದಿರುವುದು ಪತ್ತೆಯಾಗಿದೆ.

ಜಿಲ್ಲೆಯಲ್ಲಿ ಕ್ಯಾನ್ಸರ್ ಸಂಖ್ಯೆ ಕಳೆದ ನಾಲ್ಕೈದು ವರ್ಷದಲ್ಲಿ ನೋಡಿದರೆ ಪ್ರತಿ ವರ್ಷ ಏರುತ್ತಲೇ ಇದ್ದು ಇದಕ್ಕೆ ಕಾರಣ ಏನೆಂಬುದು ಮಾತ್ರ ನಿಗೂಢವಾಗಿದೆ. ಇನ್ನು ಯಲ್ಲಾಪುರ, ಶಿರಸಿ, ಸಿದ್ದಾಪುರ, ಅಂಕೋಲಾದ ಅಚವೆ, ಅಗಸೂರು ಭಾಗದಲ್ಲಿ ಹಾಗೂ ಕಾರವಾರ ತಾಲೂಕಿನ ಕದ್ರಾ ಸುತ್ತಮುತ್ತಲಿನ ಭಾಗದಲ್ಲಿ ಕ್ಯಾನ್ಸರ್ ಸಂಖ್ಯೆ ಪತ್ತೆಯಾಗಿದ್ದು ಕಾರಣ ಏನೆಂಬುವ ಹುಡುಕಾಟದಲ್ಲಿದ್ದಾರೆ.

ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಪ್ರಾರಂಭಕ್ಕೆ ಸರ್ಕಾರ ಹಸಿರು ನಿಶಾನೆ ತೋರಿದೆ. ಸದ್ಯ ಇನ್ನೂ ಕಟ್ಟಡ ಕಾಮಗಾರಿ ನಡೆಯುತ್ತಿದ್ದು ಎರಡು ವರ್ಷಗಳ ನಂತರವೇ ಈ ಚಿಕಿತ್ಸೆ ಪ್ರಾರಂಭವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸದ್ಯ ಕ್ಯಾನ್ಸರ್ ಪತ್ತೆಯಾದವರು ಬೇರೆ ಜಿಲ್ಲೆಗಳಲ್ಲಿನ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುವ ಅನಿವಾರ್ಯತೆ ಎದುರಾಗಿದ್ದು ಜಿಲ್ಲೆಯಲ್ಲಿ ಕ್ಯಾನ್ಸರ್ ಪ್ರಕರಣ ಹೆಚ್ಚುತ್ತಿರುವುದನ್ನ ಗಂಭೀರವಾಗಿ ತೆಗೆದುಕೊಂಡು ಜಿಲ್ಲಾ ಆಸ್ಪತ್ರೆಯಲ್ಲಿ ತಜ್ಞರ ನೇಮಕ ಹಾಗೂ ಚಿಕಿತ್ಸೆಗೆ ವ್ಯವಸ್ಥೆಯನ್ನ ಮಾಡಬೇಕು ಎನ್ನುವುದು ಸ್ಥಳೀಯರ ಆಗ್ರಹವಾಗಿದೆ.

300x250 AD

ಕ್ಯಾನ್ಸರ್ ಬಗ್ಗೆ ಮುಂಜಾಗೃತೆ ಇರಲಿ: ಶಿವಾನಂದ ಕುಡ್ತಲಕರ್
ಕ್ಯಾನ್ಸರ್ ಬಗ್ಗೆ ಜನರಿಗೆ ಮುಂಜಾಗೃತೆ ಇದ್ದರೆ ಹೋರಾಟ ಮಾಡಿ ಕ್ಯಾನ್ಸರ್ ಗೆದ್ದು ಬರಬಹದು ಎನ್ನುವುದು ಜಿಲ್ಲಾ ಸರ್ಜನ್ ಶಿವಾನಂದ ಕುಡ್ತಲಕರ್ ಅಭಿಪ್ರಾಯ.

ಜಿಲ್ಲೆಯಲ್ಲಿ ಕ್ಯಾನ್ಸರ್ ಪ್ರಕರಣ ಹೆಚ್ಚಾಗುತ್ತಿದೆ. ಇದಕ್ಕೆ ಕಾರಣ ವಿಕಿರಣ, ತಂಬಾಕು ಸೇವನೆ, ಆಹಾರ ಪದ್ದತಿ ಜೊತೆಗೆ ಅನುವಂಶೀಯ ಕಾರಣ ಇರಬಹುದು. ಕ್ಯಾನ್ಸರ್ ಒಮ್ಮೆಲೇ ಬರುವ ಕಾಯಿಲೆಯಲ್ಲ. ದೇಹದಲ್ಲಿ ಸ್ವಲ್ಪ ವ್ಯತ್ಯಾಸ ಆದರೂ ವೈದ್ಯರ ಬಳಿ ಹೋಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು.

ಕ್ಯಾನ್ಸರ್ ಎಂದು ಪತ್ತೆಯಾದರೆ ನುರಿತ ವೈದ್ಯರ ಬಳಿಯೇ ಚಿಕಿತ್ಸೆ ಪಡೆಯಬೇಕು. ದೇಹದಲ್ಲಿ ಬದಲಾವಣೆಗಳಾಗುತ್ತಿದ್ದರು ನಿರ್ಲಕ್ಷ ತೋರಬಾರದು. ಕಾರವಾರ ಜಿಲ್ಲಾ ಆಸ್ಪತ್ರೆಯಲ್ಲಿ ನೂತನ ಕಟ್ಟದಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತಿದ್ದು ಶೀಘ್ರದಲ್ಲೇ ಆಸ್ಪತ್ರೆ ನಿರ್ಮಾಣವಾಗಲಿದೆ ಎನ್ನುತ್ತಾರೆ ಶಿವಾನಂದ ಕುಡ್ತಲಕರ್.

500ಕ್ಕೂ ಹೆಚ್ಚು ಪ್ರಕರಣ…!
ಕೇವಲ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾದ ಪ್ರಕರಣವೇ 225ಕ್ಕೂ ಅಧಿಕವಾಗಿದ್ದು ಖಾಸಗಿ ಆಸ್ಪತ್ರೆ, ಮೃತಪಟ್ಟ ಪ್ರಕರಣಗಳನ್ನ ಕ್ರೂಡಿಕರಿಸಿದರೆ ಜಿಲ್ಲೆಯಲ್ಲಿ ವರ್ಷಕ್ಕೆ 500ಕ್ಕೂ ಅಧಿಕ ಪ್ರಕರಣ ಪತ್ತೆಯಾಗಿದೆ ಎನ್ನಲಾಗಿದೆ.

ಕ್ಯಾನ್ಸರ್ ನಿಂದ ಚಿಕಿತ್ಸೆ ಸಿಗದೇ ಮನೆಯಲ್ಲಿಯೇ ಹಲವರು ಮೃತಪಟ್ಟರೇ, ಇನ್ನು ಹಲವರು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿ ಕ್ಯಾನ್ಸರ್ ಧೃಡಪಟ್ಟರೇ ಅಲ್ಲೇ ಚಿಕತ್ಸೆ ಪಡೆಯುತ್ತಿದ್ದಾರೆ. ಇಂತವರ ಲೆಕ್ಕ ಸರ್ಕಾರದ ಬಳಿಯೂ ಸಿಗುತ್ತಿಲ್ಲ. ಸದ್ಯ ಜಿಲ್ಲೆಯಲ್ಲಿ ಈ ಸಂಖ್ಯೆ 500 ದಾಟಿರಬಹುದು ಎನ್ನಲಾಗಿದ್ದು ಕ್ಯಾನ್ಸರ್ ಹೆಚ್ಚಳಕ್ಕೆ ನಿಗಧಿತ ಕಾರಣ ಕಂಡು ಹಿಡಿಯಬೇಕು ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ. 

Share This
300x250 AD
300x250 AD
300x250 AD
Back to top