Slide
Slide
Slide
previous arrow
next arrow

ಆರೋಗ್ಯ, ಶಿಕ್ಷಣ,ಔಷಧ ಕುರಿತು ಉಪನ್ಯಾಸ: ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣಾ ಕಾರ್ಯಕ್ರಮ

300x250 AD

ಶಿರಸಿ: ತಾಲೂಕಿನ ಹಲಸಿನಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘ (ರಿ.) ಜಿಲ್ಲಾ ಶಾಖೆ ಉತ್ತರ ಕನ್ನಡ, ಗ್ರೀನ್ ಕೇರ್ (ರಿ.) ಶಿರಸಿ, ಇಕೋ ಕೇರ್ (ರಿ.) ಶಿರಸಿ. ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್ (ರಿ.) ಶಿರಸಿ, ಇವರ ಸಹಯೋಗದಲ್ಲಿ ಡಿ.9ರಂದು ನಡೆದ ಆರೋಗ್ಯ ಶಿಕ್ಷಣ ಮತ್ತು ಔಷಧಗಳ ಬಗ್ಗೆ ಉಪನ್ಯಾಸ ಹಾಗೂ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣಾ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀಮತಿ ಕುಮುದಾ ಎಂ. ಹೆಗಡೆ ದೀಪ ಬೆಳಗಿಸಿ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಶಿರಸಿ ತಾಲೂಕಿನ ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾದ ಶ್ರೀಧರ್ ಎಸ್ ನಾಯ್ಕ ಮಾತನಾಡಿ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಗಳ ಸಂಘ, ಜಿಲ್ಲಾ ಶಾಖೆ: ಉತ್ತರ ಕನ್ನಡದ ಅಧ್ಯಕ್ಷರಾದ ಮಹೇಶ್ ಡಿ. ನಾಯಕ ಆರೋಗ್ಯ ಶಿಕ್ಷಣದ ಕುರಿತು ಮಾಹಿತಿ ನೀಡಿದರು. ಗ್ರೀನ್ ಕೇರ್ ಸಂಸ್ಥೆಯ ಕಾರ್ಯದರ್ಶಿ ಜಿತೇಂದ್ರ ಕುಮಾರ್ ತೋನ್ಸೆ ಮಾತನಾಡಿ ಮಾನಸಿಕ ಆರೋಗ್ಯ ಮತ್ತು ಪರಿಸರದ ಸ್ವಚ್ಛತೆ ಬಗ್ಗೆ ಶಾಲಾ ಮಕ್ಕಳೊಡನೆ ಸಂವಾದ ನಡೆಸಿದರು. ಮಾನವ ಹಕ್ಕುಗಳ ರಕ್ಷಣಾ ಪರಿಷತ್ತಿನ ಉಪಾಧ್ಯಕ್ಷರಾದ ಮಹೇಶ್ ಗಾಳಿಮನೆ ಮಾನವ ಹಕ್ಕುಗಳ ಕುರಿತು ಮಾಹಿತಿ ನೀಡಿ ಮಕ್ಕಳೊಂದಿಗೆ ಸಂವಾದ ನಡೆಸಿದರು. ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ವಿ.ಸಿ. ಹಿರೇಮಠ್ ಮತ್ತು ವಿ. ಎಂ. ಸುಧಾಕರ್ ಉಪಸ್ಥಿತರಿದ್ದರು. NRLM ಜಿಲ್ಲಾ ವ್ಯವಸ್ಥಾಪಕರಾದ ಪುಂಡಲಿಕ್ ಸಿರ್ಸಿಕರ್ ಮಾತನಾಡಿ ಶಾಲಾ ಮಕ್ಕಳಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಿದರು. ಇಕೋ ಕೇರ್ ನಿರ್ದೇಶಕರಾದ ಜಗದೀಶ್ ನಾಯಕ, ಜೆ.ಕೆ. ಎಂಟರ್ಪ್ರೈಸಸ್ ವ್ಯವಸ್ಥಾಪಕರಾದ ಮಹಾಂತೇಶ್ ಪ್ರಭುದೇವ್ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರು ಸಹಶಿಕ್ಷಕರು, ಪಾಲಕರು, ಉಪಸ್ಥಿತರಿದ್ದರು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಿಗೆ ಮತ್ತು ಮುಖ್ಯೋಪಾಧ್ಯಾಯರಿಗೆ ಸಂಸ್ಥೆಯವರು ಪ್ರಥಮ ಚಿಕಿತ್ಸೆ ಪೆಟ್ಟಿಗೆಯನ್ನು ಹಸ್ತಾಂತರಿಸಿದರು. ರಾಜೇಶ್ ವರ್ಣೇಕರ್ ಪ್ರಥಮ ಚಿಕಿತ್ಸೆ ಪೆಟ್ಟಿಗೆಯನ್ನು ಉಪಯೋಗಿಸುವ ಬಗ್ಗೆ ಮತ್ತು ಅದರ ಉಪಯೋಗದ ಬಗ್ಗೆ ತಿಳಿಸಿದರು. ಇಕೋ ಕೇರ್ ನ ಅಧ್ಯಕ್ಷರಾದ ಸುನಿಲ್ ಭೋವಿಯವರು ಸ್ವಾಗತಿಸಿದರೆ, ರಮೇಶ್ ಬಿ ನಾಯ್ಕ್, ಕಾರ್ಯದರ್ಶಿ, ಔಷಧ ಮಾರಾಟ ಪ್ರತಿನಿಧಿಗಳ ಸಂಘ, ಶಿರಸಿ ಘಟಕ ಇವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಶಾಲಾ ಶಿಕ್ಷಕರಾದ ಮೋಹನ್ ಎಂ. ಶೆಟ್ಟಿ ವಂದಿಸಿದರು.

300x250 AD
Share This
300x250 AD
300x250 AD
300x250 AD
Back to top