Slide
Slide
Slide
previous arrow
next arrow

ಬಾವಿಗೆ ಬಿದ್ದ ಆಕಳು ರಕ್ಷಣೆ

300x250 AD

ಕುಮಟಾ: ಇಲ್ಲಿನ ಹೆರವಟ್ಟಾದ ಮನೆಯೊಂದರ 30 ಅಡಿ ಆಳದ ಬಾವಿಯಲ್ಲಿ ಬಿದ್ದ ಆಕಳನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ನಡೆದಿದೆ.

ಹೆರವಟ್ಟಾದ ರಾಮದಾಸ ಭಟ್ಟ ಎನ್ನುವವರ ಮನೆಯ 30 ಅಡಿ ಆಳದ ಬಾವಿಯಲ್ಲಿ ಆಕಸ್ಮಿಕವಾಗಿ ಆಕಳು ಬಿದ್ದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಕಳನ್ನು ರಕ್ಷಣೆ ಮಾಡುವ ಮೂಲಕ ಗೋ ಪ್ರೇಮ ಮೆರೆದಿದ್ದಾರೆ.

ಬಾವಿಗೆ ಆಕಳು ಬಿದ್ದ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಬಾವಿಗೆ ಇಳಿದು ಆಕಳನ್ನು ಸುರಕ್ಷಿತವಾಗಿ ಮೇಲಕ್ಕೆತ್ತುವ ಮೂಲಕ ರಕ್ಷಣೆ ಮಾಡಿದ್ದಾರೆ‌.

300x250 AD

ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಪ್ರಭಾರ ಠಾಣಾಧಿಕಾರಿ ರಾಘವೇಂದ್ರ ಪಟಗಾರ, ಚಾಲಕ ರಮಜಾನ್ ಸಾಬ, ಚಂದ್ರ ಮೊಗೇರ, ನಾಗರಾಜ ಪಟಗಾರ, ಚಂದ್ರಶೇಖರ ಗೌಡ ಪಾಲ್ಗೊಂಡಿದ್ದರು.

Share This
300x250 AD
300x250 AD
300x250 AD
Back to top