Slide
Slide
Slide
previous arrow
next arrow

ಬಿಡಾಡಿ ದನಕ್ಕೆ ಬೈಕ್ ಡಿಕ್ಕಿ : ಸವಾರ ಸಾವು

300x250 AD

ಕಾರವಾರ: ನಗರದ ನಂದನಗದ್ದಾದಲ್ಲಿ ರಾತ್ರಿಯ ವೇಳೆ ರಸ್ತೆಯ ಮೇಲೆ ಮಲಗಿದ್ದ ಬಿಡಾಡಿ ದನಕ್ಕೆ ಬೈಕ್‌ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ನಡೆದಿದೆ.

ತಾಲೂಕಿನ ಕಡವಾಡ ಗ್ರಾಮದ ಶಂಕರ ರೋಹಿದಾಸ ನಾಯ್ಕ (27) ಮೃತಪಟ್ಟ ಬೈಕ್ ಸವಾರನಾಗಿದ್ದಾನೆ.

300x250 AD

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಂಕರನಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಗೋವಾದ ಬಾಂಬೋಲಿಮ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

Share This
300x250 AD
300x250 AD
300x250 AD
Back to top