Slide
Slide
Slide
previous arrow
next arrow

ಅದ್ದೂರಿ ಮೆರವಣಿಗೆಯೊಂದಿಗೆ ಶ್ರೀಕೃಷ್ಣಮೂರ್ತಿಯ ವಿಸರ್ಜನೆ

300x250 AD

ಕಾರವಾರ: ತಾಲೂಕಿನ ಶಿರವಾಡ ಗ್ರಾಮದ ಕೋಣಮಕ್ಕಿಯಲ್ಲಿ ದಸರಾ ಹಬ್ಬದಂದು ಪ್ರತಿಷ್ಠಾಪಿಸಿ ಪೂಜಿಸಲಾಗುತ್ತಿದ್ದ ಶ್ರೀಕೃಷ್ಣಮೂರ್ತಿಯ ವಿಸರ್ಜನೆ ಕಾರ್ಯಕ್ರಮವು ಭಾನುವಾರ ಅದ್ಧೂರಿ ಮೆರವಣಿಗೆಯೊಂದಿಗೆ ನೆರವೇರಿತು.

ಶನಿವಾರ ರಾತ್ರಿ ಶ್ರೀಕೃಷ್ಣಮೂರ್ತಿಯ ಮಹಾಪೂಜೆ ನೆರವೇರಿತು. ಬಳಿಕ ಮನರಂಜನೆಗಾಗಿ ಸ್ಥಳಿಯರು ಹಾಗೂ ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ ಪುಟಾಣಿಗಳಿಂದ ಮನರಂಜನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಗ್ರಾಮದ ಹಿರಿಯರು ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಡೆದ ವಿವಿಧ ಛದ್ಮವೇಶಗಳು ಹಾಗೂ ನೃತ್ಯ ಕಾರ್ಯಕ್ರಮ ನೆರೆದ ಪ್ರೇಕ್ಷಕರನ್ನು ರಂಜಿಸಿದವು. ಕಾರ್ಯಕ್ರಮದ ಕೊನೆಯಲ್ಲಿ ಭಾಗವಹಿಸಿದ ಎಲ್ಲ ಕಲಾವಿದರಿಗೆ ನೆನಪಿನ ಕಾಣಿಕೆಯನ್ನು ನೀಡಲಾಯಿತು.

300x250 AD

ಭಾನುವಾರ ಸಂಜೆ ಶ್ರೀಕೃಷ್ಣ ಮೂರ್ತಿಗೆ ಪೂಜೆ ಸಲ್ಲಿಸಿ ಬಳಿಕ ಮೊಸರು ಮಡಿಕೆ ಒಡೆಯುವ ಕಾರ್ಯಕ್ರಮ ನಡೆಯಿತು. ಬಳಿಕ ಅದ್ಧೂರಿ ಮೆರವಣಿಗೆಯ ಮೂಲಕ ಶ್ರೀಕೃಷ್ಣ ಶ್ರೀ ಕೃಷ್ಣಮೂರ್ತಿ ಭಕ್ತ ಮಂಡಳಿಯವರು ಸೇರಿದಂತೆ ಸ್ಥಳೀಯರು ಹಾಗೂ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ಪಾಲ್ಗೊಂಡಿದ್ದರು.

Share This
300x250 AD
300x250 AD
300x250 AD
Back to top