• Slide
    Slide
    Slide
    previous arrow
    next arrow
  • ಸಾರ್ವಜನಿಕ ಪ್ರದೇಶದಲ್ಲಿ ಪ್ರತಿಮೆ ಸ್ಥಾಪನೆಗೆ ಅವಕಾಶ ನೀಡಬೇಡಿ; ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

    300x250 AD

    ಬೆಂಗಳೂರು: ರಸ್ತೆಗಳು, ಪಾದಚಾರಿ ಮಾರ್ಗಗಳು ಸೇರಿದಂತೆ ಯಾವುದೇ ಸಾರ್ವಜನಿಕ ಪ್ರದೇಶಗಳಲ್ಲಿ ಪ್ರತಿಮೆಗಳ ಸ್ಥಾಪನೆಗೆ, ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡದಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

    ಮೈಸೂರಿನ ಗನ್‍ಹೌಸ್ ಸರ್ಕಲ್‍ನಲ್ಲಿ ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮೀಜಿ ಪ್ರತಿಮೆ ಸ್ಥಾಪನೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಈ ಆದೇಶವನ್ನು ನೀಡಿದೆ.

    300x250 AD

    ಹಾಗೆಯೇ ಗನ್‍ಹೌಸ್‍ನಲ್ಲಿ ಪ್ರತಿಮೆ ಸ್ಥಾಪಿಸುವ ಮೈಸೂರು ಪಾಲಿಕೆಯ ನಿರ್ಣಯವನ್ನು ರದ್ದು ಗೊಳಿಸಿ ನ್ಯಾಯಪೀಠ ಈ ಆದೇಶ ಹೊರಡಿಸಿದೆ. ಈಗಾಗಲೇ ಸಾರ್ವಜನಿಕ ಪ್ರದೇಶದಲ್ಲಿ ಪ್ರತಿಮೆಗಳ ಸ್ಥಾಪನೆಗೆ ಸುಪ್ರೀಂಕೋರ್ಟ್ ನಿರ್ಬಂಧ ಹೇರಿದ್ದು, ಈ ಆದೇಶವನ್ನು ಆಧರಿಸಿ ಹೈಕೋರ್ಟ್ ಈ ನಿರ್ದೇಶನವನ್ನು ನೀಡಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top