Slide
Slide
Slide
previous arrow
next arrow

ವಿವಿಧ ಇಲಾಖೆ ಇಂಜಿನಿಯರ್‌ಗಳ ಸಮಾಲೋಚನಾ ಸಭೆ ಯಶಸ್ವಿ

300x250 AD

ಯಲ್ಲಾಪುರ: ತಾಲೂಕಿನ ಚುನಾಯಿತ ಪ್ರತಿನಿಧಿಗಳ ಒಕ್ಕೂಟದ ಆಶ್ರಯದಲ್ಲಿ ಪಟ್ಟಣದ ಸಾಮರ್ಥ್ಯ ಸೌಧದಲ್ಲಿ ಪಿಡಿಒ, ಹೆಸ್ಕಾಂ ಹಾಗೂ ನೀರು ಸರಬರಾಜು ಇಲಾಖೆಯ ಇಂಜಿನಿಯರ್ ಗಳ ಸಮಾಲೋಚನಾ ಸಭೆ ನಡೆಯಿತು.

ಚುನಾಯಿತ ಗ್ರಾಮ ಪ್ರತಿನಿಧಿಗಳ ಮಹಾ ಒಕ್ಕೂಟದ ರಾಜ್ಯಾಧ್ಯಕ್ಷ ಸತೀಶ್ ಕಾಡಶೆಟ್ಟಿಹಳ್ಳಿ, ತಾ.ಪಂ ಇಒ ಜಗದೀಶ ಕಮ್ಮಾರ ಸಭೆಯ ನೇತೃತ್ವ ವಹಿಸಿದ್ದರು. ಹೆಸ್ಕಾಂ ಮತ್ತು ನೀರು ಸರಬರಾಜು ಇಲಾಖೆಯ ಎಸ್ಕ್ರೋದಲ್ಲಿ ಇರುವ ಹಣವನ್ನು ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗಾಗಿ ತೆಗೆದುಕೊಳ್ಳುವ ಕುರಿತು ಚರ್ಚಿಸಲಾಯಿತು. ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಒಗಳು, ಒಕ್ಕೂಟದ ಸದಸ್ಯರು ಸಮಾಲೋಚನೆಯಲ್ಲಿ ಭಾಗವಹಿಸಿದ್ದರು.

300x250 AD

ಚುನಾಯಿತ ಗ್ರಾಮ ಪ್ರತಿನಿಧಿಗಳ ಒಕ್ಕೂಟದ ತಾಲೂಕು ಅಧ್ಯಕ್ಷ ಎಂ .ಕೆ .ಭಟ್ಟ .ಯಡಳ್ಳಿ, ರಾಜ್ಯ ಸಮಿತಿ ಸದಸ್ಯ ಸುಬ್ಬಣ್ಣ ಕುಂಟೆಕಳಿ, ಜಿಲ್ಲಾ ಸಮಿತಿಯ ಸದಸ್ಯ ಗಣೇಶ ಹೆಗಡೆ, ತಾಲೂಕು ಕಾರ್ಯದರ್ಶಿ ಕೆ.ಟಿ.ಹೆಗಡೆ ಇತರರಿದ್ದರು.

Share This
300x250 AD
300x250 AD
300x250 AD
Back to top