Slide
Slide
Slide
previous arrow
next arrow

ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘದ ಮುಖಂಡರ ಜೊತೆ ಸಭೆ

300x250 AD

ದಾಂಡೇಲಿ : ನಗರದ ಸಿಐಟಿಯು ಕಾರ್ಯಾಲಯದಲ್ಲಿ ದಾಂಡೇಲಿ ಮತ್ತು ಜೋಯಿಡಾ ತಾಲ್ಲೂಕು ಕಟ್ಟಡ ನಿರ್ಮಾಣ ಕಾರ್ಮಿಕ ಮುಖಂಡರ ಸಭೆಯು ಇಂದು ಶುಕ್ರವಾರ ನಡೆಯಿತು.

ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ತಿಲಕ್ ಗೌಡ ಮತ್ತು ಜಿಲ್ಲಾ ಉಪಾಧ್ಯಕ್ಷರಾದ ಶಾಂತಾರಾಮ ನಾಯಕ ಹಾಜರಿದ್ದು, ಕಾರ್ಮಿಕರ ಬೇಡಿಕೆಗಳು ಮತ್ತು ಹೋರಾಟಗಳ ಬಗ್ಗೆ ವಿವರಣೆ ನೀಡಿದರು. ಕಟ್ಟಡ ಕಾರ್ಮಿಕರ ಬೇಡಿಕೆಗಳು ಈಡೇರಬೇಕಾದರೆ ಸಂಘಟಿತ ಹೋರಾಟದಿಂದ ಮಾತ್ರ ಸಾಧ್ಯ. ಈ ನಿಟ್ಟಿನಲ್ಲಿ ಕಟ್ಟಡ ಕಾರ್ಮಿಕರು ಸಂಘಟನೆಯನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಒಂದಾಗಿ ಶ್ರಮಿಸಬೇಕೆಂದು ಕರೆ ನೀಡಿದರು.

300x250 AD

ಈ ಸಂದರ್ಭದಲ್ಲಿ ಸಂಘದ ತಾಲ್ಲೂಕು ಪದಾಧಿಕಾರಿಗಳಾದ ಕೃಷ್ಣ ಭಟ್, ಪ್ರಭಾಕರ್ ಅಮ್ಟೇಕರ, ಕೊಸಾಂವ ಡಿಸೋಜ , ಇಮಿಲಿಯಾ.ವಿ. ಡಿಸೋಜ, ಸರೋಜಾ ಮುಂತಾದವರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top