Slide
Slide
Slide
previous arrow
next arrow

ಅಪರಿಚಿತ ವಾಹನ ಡಿಕ್ಕಿ; ಸವಾರಗೆ ಗಾಯ

300x250 AD

ಜೋಯಿಡಾ: ತಾಲ್ಲೂಕಿನ ಜಗಲ್ಬೇಟ್-ಸಿಂಗರಗಾವ್ ರಸ್ತೆಯಲ್ಲಿ ದ್ವಿಚಕ್ರ ವಾಹನವೊಂದಕ್ಕೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಗಾಯಗೊಂಡ ಘಟನೆ ಶನಿವಾರ ನಡೆದಿದೆ.

ಜೋಯಿಡಾ ತಾಲೂಕಿನ ರಾಮನಗರದ ನಿವಾಸಿ ಸದಾನಂದ ನಗರಾಳೆ ಎಂಬವರೆ ಗಾಯಗೊಂಡ ದ್ವಿಚಕ್ರ ವಾಹನ ಸವಾರರಾಗಿದ್ದಾರೆ. ಇವರು ದಾಂಡೇಲಿಯಿಂದ ರಾಮನಗರಕ್ಕೆ ಜಗಲ್ಬೇಟ್-ಸಿಂಗರಗಾವ್ ರಸ್ತೆಯಲ್ಲಿ ಬರುತ್ತಿದ್ದಾಗ ಅಪರಿಚಿತ ವಾಹನವೊಂದು ಡಿಕ್ಕಿ ಮಾಡಿ ಪರಾರಿಯಾಗಿದೆ. ಡಿಕ್ಕಿಯ ರಭಸಕ್ಕೆ ಸದಾನಂದ ನಗರಾಳೆ ಅವರು ಗಾಯಗೊಂಡಿದ್ದು, ತಕ್ಷಣವೇ ಅವರನ್ನು ರಾಮನಗರದ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಳುಹಿಸಲಾಗಿದೆ. ಘಟನಾ ಸ್ಥಳಕ್ಕೆ ಮತ್ತು ರಾಮನಗರ ಸರಕಾರಿ ಆಸ್ಪತ್ರೆಗೆ ರಾಮನಗರದ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

300x250 AD
Share This
300x250 AD
300x250 AD
300x250 AD
Back to top