Slide
Slide
Slide
previous arrow
next arrow

ಜಿಲ್ಲಾಡಳಿತದಿಂದ ವಿಜಯ ದಿವಸ ಆಚರಣೆ

300x250 AD

ಕಾರವಾರ: ಜಿಲ್ಲಾಡಳಿತದ ವತಿಯಿಂದ ವಿಜಯ ದಿವಸ ಕಾರ್ಯಕ್ರಮವು ರವೀಂದ್ರನಾಥ ಟಾಗೋರ್ ಕಡಲ ತೀರದಲ್ಲಿರುವ ಯುದ್ಧ ನೌಕಾ ವಸ್ತು ಸಂಗ್ರಾಹಾಲಯದ ಆವರಣದಲ್ಲಿ ಶನಿವಾರ ಜರುಗಿತು. ಯುದ್ಧ ನೌಕಾ ವಸ್ತು ಸಂಗ್ರಹಾಲಯದ ಆವರಣದಲ್ಲಿರುವ ಪರಮವೀರ ಚಕ್ರ ಮೇಜರ್ ರಾಮ ರಘೋಬಾ ರಾಣೆ ಅವರ ಪುತ್ತಳಿಗೆ ಶಾಸಕ ಸತೀಶ ಸೈಲ್, ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ನೌಕಾನೆಲೆಯ ಕಿಖಖಿ ತರಬೇತಿ ತಂಡದ ಕ್ಯಾಪ್ಟನ್ ಕೆ.ಯು. ಸಿಂಗ್, ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ, ಜಿಲ್ಲಾ ಸೈನಿಕ ಮಂಡಳಿಯ ಉಪಾಧ್ಯಕ್ಷ ನಿವೃತ್ತ ಸ್ಕ್ವಾಡ್ ಲೀಡರ್ ಎಸ್.ಎಫ್. ಗಾಂವಕರ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕ ಡಾ. ಕ್ಯಾಪ್ಟನ್ ರಮೇಶ ರಾವ್, ತಹಶೀಲ್ದಾರ ನಿಶ್ಚಲ್ ನರೋನಾ, ಪೌರಾಯುಕ್ತ ಚಂದ್ರಮೌಳಿ, ಪುಷ್ಪ ಗುಚ್ಛವಿರಿಸಿ, ಗೌರವ ನಮನ ಸಲ್ಲಿಸಿದರು.
ಬಳಿಕ ಮಾತನಾಡಿದ ಶಾಸಕ ಸತೀಶ ಸೈಲ್ 1971 ರ ಯುದ್ಧದಲ್ಲಿ ಪಾಕಿಸ್ತಾನದಿಂದ ಬಾಂಗ್ಲಾದೇಶವನ್ನು ವಿಮೋಚನೆ ಮಾಡುವಲ್ಲಿ ಭಾರತೀಯ ಯೋಧರ ಕೊಡುಗೆ ಅಪಾರ. ಯೋಧರ ತ್ಯಾಗ ಬಲಿದಾನ ಯವ ಪೀಳಿಗೆಗೆ ಸ್ಪೂರ್ತಿದಾಯಕ. ಜಿಲ್ಲೆಯ ಮಣ ್ಣನ ಮಗ ರಾಮಾ ರಘೋಬಾ ರಾಣೆ ಜೀವಂತವಾಗಿರುವಾಗಲೇ ಪರಮವೀರ ಚಕ್ರ ಸ್ವೀಕರಿಸಿದ ಮೊದಲಿಗರು. ಜಿಲ್ಲೆಯ ಯವ ಪೀಳಿಗೆಯಲ್ಲಿ ಸೈನ್ಯಕ್ಕೆ ಸೇರಲು ಬೇಕಾದ ಎಲ್ಲಾ ಅಗತ್ಯ ಅರ್ಹತೆ ಗಳು ಇದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸೇನೆಗೆ ಸೇರ್ಪಡೆಯಾಗಿ, ದೇಶ ಸೇವೆ ಸಲ್ಲಿಸಬೇಕು ಎಂದರು.
ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಮಾತನಾಡಿ, 1971 ರ ಡಿಸೆಂಬರ್ 3 ರಿಂದ 16 ರವರೆಗೆ ನಡೆದ ಯುದ್ಧದಲ್ಲಿ ಸಾವಿರಾರಾರು ಯೋಧರು ದೇಶಕ್ಕಾಗಿ ತಮ್ಮ ಜೀವವನ್ನೇ ಬಲಿದಾನ ಮಾಡಿದ್ದಾರೆ. ಅವರ ತ್ಯಾಗ, ಧೈರ್ಯ, ಶೌರ್ಯವನ್ನು ನಾವು ಸ್ಮರಿಸಬೇಕು ಎಂದರು.
ಜಿಲ್ಲೆಯಲ್ಲಿ ಭೂ ಸೇನೆ, ವಾಯು ಸೇನೆ ಹಾಗೂ ನೌಕಾ ಸೇನೆಗಳಲ್ಲಿ ಸೇವೆ ಸಲ್ಲಿಸಬೇಕೆಂಬ ಯುವಕರಿಗೆ ಸರ್ಕಾರದಿಂದ ಉಚಿತ ತರಬೇತಿ ನೀಡಲಾಗುವುದು. ಈಗಾಗಲೇ ನೌಕಾದಳದ ಅಧಿಕಾರಿಗಳಿಂದ ತರಬೇತಿಯನ್ನು ನೀಡಲಾಗಿದೆ ಮುಂದಿನ ದಿನಗಳಲ್ಲಿ ಸುವ್ಯವಸ್ಥೆವಾದ ತರಬೇತಿಯನ್ನು ಮಾಡಲು ನಿರ್ಧರಿಸಲಾಗಿದ್ದು, ಈ ತರಬೇತಿಯಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಾವು ಕಂಡ ಕನಸು ನನಸು ಮಾಡಿಕೊಳ್ಳಲು ಜಿಲ್ಲಾಡಳಿತದಿಂದ ಅವಕಾಶವನ್ನು ಕಲ್ಪಿಸಲಾಗುತ್ತದೆ ಎಂದರು.
ನೌಕಾನೆಲೆಯ ಕಿಖಖಿ ತರಬೇತಿ ತಂಡದ ಕ್ಯಾಪ್ಟನ್ ಕೆ.ಯು. ಸಿಂಗ್ ಮಾತನಾಡಿ, ಯುವ ಜನತೆ ಕೇವಲ ಸರ್ಕಾರಿ ಉದ್ಯೋಗ ಪಡೆಯಲು ಮಾತ್ರ ಯೋಚಿಸದೆ ದೇಶದ ಸೇವೆ ಸಲ್ಲಿಸಲು ಸ್ಪರ್ಧಾತ್ಮಕ ರೀತಿಯಲ್ಲಿ ಪ್ರಯತ್ನಪಟ್ಟಾಗ ಯಶಸ್ವಿಯಾಗಿ ಸೇನೆ ಸೇರಬಹುದು. ಸೇನೆ ಸೇರಲು ಬಯಸುವ ಯುವ ಜನತೆಗೆ ಅದರಲ್ಲೂ ನೌಕಾದಳದಲ್ಲಿ ವಿಫುಲ ಅವಕಾಶಗಳಿದ್ದು, ಅದಕ್ಕೆ ಬೇಕಾದ ಪೂರ್ವ ಸಿದ್ದತೆ ಮಾಡಿಕೊಂಡಲ್ಲಿ ದೇಶ ಸೇವೆ ಸಲ್ಲಿಸಲು ಅವಕಾಶಗಳು ಸಿಗಲಿವೆ ಎಂದರು.
ಜಿಲ್ಲಾ ಸೈನಿಕ ಮಂಡಳಿಯ ಉಪಾಧ್ಯಕ್ಷರಾದ ನಿವೃತ್ತ ಸ್ಕ್ವಾಡ್ ಲೀಡರ್ ಎಸ್.ಎಫ್ ಗಾಂವಕರ ಮಾತನಾಡಿ, ರಾಷ್ಟ್ರದ ಗಡಿ ಪ್ರದೇಶದಲ್ಲಿ ಕ್ಲಿಷ್ಟಕರವಾದ ಸಂದರ್ಭದಲ್ಲೂ ದಿನದ 24 ಗಂಟೆ ದೇಶ ಸೇವೆ ಮಾಡುತ್ತಿರುವ ಯೋಧರ ತ್ಯಾಗ ಬಲಿದಾನದಿಂದ ನಾವೆಲ್ಲರೂ ಸಮೃದ್ಧ ಜೀವನ ನಡೆಸಲು ಸಾಧ್ಯವಾಗಿದೆ. ಅಂತಹ ವೀರ ಯೋಧರ ತ್ಯಾಗ, ಬಲಿದಾನವನ್ನು ಸ್ಮರಿಸಬೇಕು ಹಾಗೂ ವೀರ ಸೇನಾನಿಗಳ ಕಷ್ಟಕ್ಕೆ ಸ್ಪಂದಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಯುದ್ದದಲ್ಲಿ ಬಲಿದಾನಗೈದ ಯೋಧರ ಅವಲಂಬಭಿತರಿಗೆ ಸನ್ಮಾನ ಮಾಡಲಾಯಿತು ಹಾಗೂ ಜಿಲ್ಲಾಧಿಕಾರಿ ಸಶಸ್ತ್ರ ಪಡೆಗಳ ಧ್ವಜ ಬಿಡುಗಡೆ ಮಾಡಿದರು.
ಐಎನ್‌ಎಸ್ ಕದಂಬ ನೌಕಾನೆಲೆಯ ಬ್ಯಾಂಡ್ ಸಿಬ್ಬಂದಿಗಳ ನೇತೃತ್ವದ ತಂಡ ವಾದ್ಯದೊಂದಿಗೆ ಗೌರವ ನಮನ ಸಲ್ಲಿಸಿದರು. ಮಾಜಿ ಸೈನಿಕರು, ಎನ್‌ಸಿಸಿ ವಿದ್ಯಾರ್ಥಿಗಳು, ಕಾಲೇಜು ವಿದ್ಯಾರ್ಥಿಗಳು ಇತರರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top