Slide
Slide
Slide
previous arrow
next arrow

ಡಿ.23ಕ್ಕೆ ಮುತ್ತಿನಕೆರೆಯಲ್ಲಿ ‘ದೀಪೋತ್ಸವ-ಯಕ್ಷಗಾನ-ಭಜನೆ ಕಾರ್ಯಕ್ರಮ’

300x250 AD

ಶಿರಸಿ: ಕನ್ನಡ ಸಂಸ್ಕೃತಿ ಇಲಾಖೆ ಪ್ರಾಯೋಜಕತ್ವದಲ್ಲಿ ಯಕ್ಷಾಂಗಣ ಶಿರಸಿ ಇವರಿಂದ ಡಿ.23, ಶನಿವಾರ ಸಂಜೆ 6.30ರಿಂದ ತಾಲೂಕಿನ ಮುತ್ತಿನಕೆರೆಯ ಸಂಕಟಹರ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ದೀಪೋತ್ಸವ-ಯಕ್ಷಗಾನ-ಭಜನೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೋಂದಾ ಗ್ರಾ.ಪಂ. ಅಧ್ಯಕ್ಷ ರಾಮಚಂದ್ರ ಹೆಗಡೆ ಹೊಸಗದ್ದೆ ವಹಿಸಲಿದ್ದು, ಚಲನಚಿತ್ರ ನಟ ನೀರ್ನಳ್ಳಿ ರಾಮಕೃಷ್ಣ ಉದ್ಘಾಟಿಸಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಮಚಂದ್ರ ಮಡಿವಾಳ, ಶಬರ ಸಂಸ್ಥೆ ಕಾರ್ಯದರ್ಶಿ ನಾಗರಾಜ ಜೋಶಿ, ಸೋಂದಾ ಜಾಗೃತ ವೇದಿಕೆ ಕಾರ್ಯದರ್ಶಿ ಶ್ರೀಧರ ಹೆಗಡೆ ಗುಡ್ಡೇಮನೆ ಉಪಸ್ಥಿತರಿರಲಿದ್ದಾರೆ.

300x250 AD

ನಂತರದಲ್ಲಿ ಶ್ರೀ ರಾಜರಾಜೇಶ್ವರಿ ಯುವತಿ ಮಂಡಳ ಸೋಂದಾ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದ್ದು, ನಂತರ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಕಾರ್ಯಕ್ರಮಕ್ಕೆ ಸರ್ವರೂ ಆಗಮಿಸಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ.

Share This
300x250 AD
300x250 AD
300x250 AD
Back to top