Slide
Slide
Slide
previous arrow
next arrow

ಸಾತೊಡ್ಡಿ ಜಲಪಾತದಲ್ಲಿ ಮುಳುಗಿ ಯುವಕ ಸಾವು

300x250 AD

ಯಲ್ಲಾಪುರ: ತಾಲೂಕಿನ ಸಾತೊಡ್ಡಿ ಜಲಪಾತದಲ್ಲಿ ಈಜಲು ಹೋದ ಯುವಕನೊಬ್ಬ ಸೋಮವಾರ ಸಂಜೆ ಮುಳುಗಿ ಮೃತಪಟ್ಟಿದ್ದಾನೆ.

ಹುಬ್ಬಳ್ಳಿಯ ಮಲ್ಲನಗೌಡ ಲಿಂಗನಗೌಡ ಮರಿಗೌಡ್ರು (18) ಮೃತ ಯುವಕ. ತನ್ನ ನಾಲ್ಕು ಜನ ಸ್ನೇಹಿತರೊಂದಿಗೆ ಸಾತೊಡ್ಡಿ ಜಲಪಾತ ವೀಕ್ಷಣೆಗೆ ಬಂದಿದ್ದ ಈತ ಈಜಲೆಂದು ನೀರಿಗಿಳಿದಿದ್ದ. ಆ ವೇಳೆ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟಿದ್ದಾನೆ. ಸ್ನೇಹಿತರು ಸ್ಥಳೀಯ ಗ್ರಾಮ ಅರಣ್ಯ ಸಮಿತಿ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಶವವನ್ನು ಶೋಧಿಸಿ, ಮೇಲಕ್ಕೆತ್ತಿದ್ದಾರೆ. ಮೃತನ ಸ್ನೇಹಿತ ಸೃಜನ್ ತಿಮ್ಮನಗೌಡ ಪಾಟೀಲ ದೂರು ನೀಡಿದ್ದು, ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

300x250 AD
Share This
300x250 AD
300x250 AD
300x250 AD
Back to top