ಕಾರವಾರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜನಪರ ಉತ್ಸವ ಕಾರ್ಯಕ್ರಮವನ್ನು ಜ. 6 ರಂದು ಸಂಜೆ 4 ಗಂಟೆಗೆ ಶಿರಸಿ ತಾಲೂಕಿನ ಬಚಗಾಂವ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ, ಸಂಸದ ಅನಂತ ಕುಮಾರ ಹೆಗಡೆ, ಶಾಸಕರಾದ ಭೀಮಣ್ಣ ಟಿ ನಾಯ್ಕ, ಅರಬೈಲ್ ಶಿವರಾಮ ಹೆಬ್ಬಾರ, ದಿನಕರ ಕೆ ಶೆಟ್ಟಿ, ಸತೀಶ ಕೆ ಸೈಲ್, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ ಸಂಕನೂರ , ಶಾಂತಾರಾಮ ಬುಡ್ನಾ ಸಿದ್ಧಿ, ಗಣಪತಿ ಉಳ್ವೇಕರ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
ಜ.6ಕ್ಕೆ ಜನಪರ ಉತ್ಸವ ಕಾರ್ಯಕ್ರಮ
![](https://euttarakannada.in/wp-content/uploads/2021/08/euk-logo-640x438.jpg?v=1628352513)