Slide
Slide
Slide
previous arrow
next arrow

ಸಾರ್ವಜನಿಕರ ಕುಂದುಕೊರತೆ ಸಭೆ ನಡೆಸಿದ ಶಾಸಕ ಭೀಮಣ್ಣ

300x250 AD

ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಶುಕ್ರವಾರ ಸಿದ್ದಾಪುರ ತಾಲೂಕಿನ ಸೋವಿನಕೊಪ್ಪ ಗ್ರಾಮ ಪಂಚಾಯ್ತಿ ಆವರಣದಲ್ಲಿ ಸಾರ್ವಜನಿಕರ ಕುಂದುಕೊರತೆ ಸಭೆ ನಡೆಸಿ ಜನರ ಅಹವಾಲು ಆಲಿಸಿದರು.

ಕುಡಿಯುವ ನೀರು, ಬೆಟ್ಟ ಭೂಮಿ, ಅತಿಕ್ರಮಣ ಸೇರಿದಂತೆ ನಾನಾ ವಿಷಯಗಳ ಕುರಿತು ಸಭೆಯಲ್ಲಿ ಶಾಸಕರ ಗಮನ ಸೆಳೆದರು. ಈ ವೇಳೆ ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕರ್ತವ್ಯಲೋಪವಾಗದಂತೆ ಕೆಲಸ ಮಾಡುವುದರ ಜತೆಗೆ ಮಾನವೀಯ ಮೌಲ್ಯವನ್ನು ಸಹ ಎತ್ತಿ ಹಿಡಿಯಬೇಕು. ವಸತಿ ಯೋಜನೆಯ ಫಲಾನುಭವಿಗಳು ಮನೆ ಕಟ್ಟುವಾಗ ಯಾರು ತೊಂದರೆ ನೀಡಬಾರದು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ತಾಲೂಕಾ ದಂಡಾಧಿಕಾರಿ ಎಂ.ಆರ್.ಕುಲಕರ್ಣಿ, ತಾಲೂಕಾ ಪಂಚಾಯ್ತಿ ಇಓ ದೇವರಾಜ ಹಿತ್ತಲಕೊಪ್ಪ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

300x250 AD
Share This
300x250 AD
300x250 AD
300x250 AD
Back to top