Slide
Slide
Slide
previous arrow
next arrow

ಜಿಲ್ಲಾ ಪತ್ರಿಕಾ ಮಂಡಳಿಯ ಸುವರ್ಣ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

300x250 AD

ಶಿರಸಿ : ಉತ್ತರ ಕನ್ನಡ ಜಿಲ್ಲಾ ಪತ್ರಿಕಾ ಮಂಡಳಿಯ ಸುವರ್ಣ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಬಿಡುಗಡೆಗೊಳಿಸಿದರು.

ನಗರದ ಜಿಲ್ಲಾ ಪತ್ರಿಕಾ ಭವನಕ್ಕೆ ಸಚಿವರಾದ ನಂತರ ಇದೇ ಮೊದಲ ಬಾರಿಗೆ ಭೇಟಿ ನೀಡಿದ ವೈದ್ಯ, ಸುವರ್ಣ ಮಹೋತ್ಸವ ರೂಪುರೇಷೆಗಳನ್ನು ಒಳಗೊಂಡ ಪತ್ರಿಕೆಯನ್ನು ಬಿಡುಗಡೆ ಮಾಡಿದರು. ಬಳಿಕ ಪತ್ರಿಕಾ ಭವನದ ಕಟ್ಟಡ, ಮುಂದಾಗಬೇಕಾದ ಕಾಮಗಾರಿಯ ವೀಕ್ಷಣೆ ಮಾಡಿದರು.

ಮಂಡಳಿಯ ಜಿಲ್ಲಾಧ್ಯಕ್ಷ ಸುಬ್ರಾಯ ಭಟ್ಟ ಬಕ್ಕಳ ಮಾತನಾಡಿ, 1974ರಲ್ಲಿ ದಿ.ಜಿ.ಎಸ್.ಹೆಗಡೆ ಅಜ್ಜೀಬಳ ಅವರಿಂದ ಆರಂಭವಾದ ಜಿಲ್ಲಾ ಪತ್ರಿಕಾ ಮಂಡಳಿ ಈಗ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದೆ. ಸಾವಿರಾರು ಪತ್ರಕರ್ತರಿಗೆ ಮಂಡಳಿ ಸಹಕಾರ ನೀಡಿದೆ. ಉತ್ತಮ ಕೆಲಸ ಮಾಡಿಕೊಂಡು ಬಂದಿರುವ ಸಂಸ್ಥೆಯ ಕಟ್ಟಡದ ಅಭಿವೃದ್ಧಿಗೆ 75ಲಕ್ಷ ರೂ ಅನುದಾಮ ಅಗತ್ಯವಿದ್ದು, ಅದನ್ನು ಒದಗಿಸಿಕೊಡಬೇಕು ಎಂದು ವಿನಂತಿಸಿದರು. ಈ ಕುರಿತು ಸಚಿವರಿಗೆ ಲಿಖಿತ ಮನವಿ ಸಲ್ಲಿಸಿದರು.

300x250 AD

ಮನವಿ ಸ್ವೀಕರಿಸಿ ಮಾತನಾಡಿದ ಸಚಿವ ವೈದ್ಯ, ಜಿಲ್ಲಾ ಪತ್ರಿಕಾ ಮಂಡಳಿ ಉತ್ತಮ ಕಾರ್ಯ ಮಾಡುತ್ತಿದೆ. ಎಲ್ಲಾ ತಾಲೂಕಿನಲ್ಲಿ ಮಂಡಳಿಯ ಅಭಿವೃದ್ಧಿಗೆ ಅಗತ್ಯವಿರುವ ಸಹಾಯಕ್ಕೆ ನಾವು ಬದ್ಧರಿದ್ದೇವೆ ಎಂದರು. ಸ್ಥಳೀಯ ಶಾಸಕ ಭೀಮಣ್ಣರ ಸಹಕಾರ ಪಡೆದು ಸರ್ಕಾರ ಮಟ್ಟದಲ್ಲಿ ಅನುದಾನ ಒದಗಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.‌

ಈ ವೇಳೆ ಶಾಸಕ ಭೀಮಣ್ಣ ನಾಯ್ಕ, ಜಿಲ್ಲಾ ಪತ್ರಿಕಾ ಮಂಡಳಿಯ ಪ್ರಧಾನ ಕಾರ್ಯದರ್ಶಿ ಸುಮಂಗಲಾ ಹೊನ್ನೆಕೊಪ್ಪ, ಖಜಾಂಚಿ ರಾಜೇಂದ್ರ ಹೆಗಡೆ, ಕಾರ್ಯದರ್ಶಿ ನರಸಿಂಹ ಸಾತೊಡ್ಡಿ, ಮಂಡಳಿಯ ಖಾಯಂ ಸದಸ್ಯ ಪ್ರದೀಪ ಶೆಟ್ಟಿ, ಶಿರಸಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಸಂದೇಶ ಭಟ್ಟ ಬೆಳಖಂಡ ಇದ್ದರು.

Share This
300x250 AD
300x250 AD
300x250 AD
Back to top