Slide
Slide
Slide
previous arrow
next arrow

ಶ್ರೀಲಕ್ಷ್ಮೀ ವೆಂಕಟರಮಣ ದೇವರಿಗೆ ಗೋಕರ್ಣ ಪರ್ತಗಾಳಿ ಶ್ರೀಗಳಿಂದ ಪೂಜೆ ಸಲ್ಲಿಕೆ

300x250 AD

ದಾಂಡೇಲಿ : ಶ್ರೀಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರಾದ ಪರಮ ಪೂಜ್ಯ ಗುರುವರ್ಯ ಶ್ರೀ ಶ್ರೀಮದ್ ವಿದ್ಯಾಧೀಶತೀರ್ಥ ಶ್ರೀಪಾದ ಸ್ವಾಮೀಜಿಯವರ ಪಾವನ ಸಾನಿಧ್ಯದಲ್ಲಿ ನಗರದ ಕುಳಗಿ ರಸ್ತೆಯಲ್ಲಿರುವ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರದ್ಧಾಭಕ್ತಿಯಿಂದ ಶುಕ್ರವಾರ ಪೂಜಾ ಕಾರ್ಯಕ್ರಮವು ಜರುಗಿತು.

ಬೆಳಿಗ್ಗೆ ಶ್ರೀರಾಮದೇವ ವೀರ ವಿಠ್ಠಲ ದೇವರ ನೈರ್ಮಲ್ಯ ವಿಸರ್ಜನಾ ಪೂಜೆ ಜರುಗಿ, ಆನಂತರ ಮಹಾಪೂಜೆ ಕಾರ್ಯಕ್ರಮ ಜರುಗಿತು. ಪೂಜಾ ಕಾರ್ಯಕ್ರಮದ ಸಂದರ್ಭದಲ್ಲಿ ಸಾಮೂಹಿಕ ಭಜನಾ ಕಾರ್ಯಕ್ರಮವು ನಡೆಯಿತು.

300x250 AD

ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಬಾಂಧವರು ಹಾಗೂ ಭಕ್ತಾಭಿಮಾನಿಗಳು ಭಾಗವಹಿಸಿದ್ದರು. ಕಾರ್ಯಕ್ರಮದ ಯಶಸ್ಸಿಗೆ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಆಡಳಿತ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಪದಾಧಿಕಾರಿಗಳು ಹಾಗೂ ಸದಸ್ಯರು, ಸಮಾಜ ಬಾಂಧವರು ಶ್ರಮಿಸುತ್ತಿದ್ದಾರೆ.

Share This
300x250 AD
300x250 AD
300x250 AD
Back to top