Slide
Slide
Slide
previous arrow
next arrow

ಯುವ ಸಮುದಾಯ ದೇಶದ ಆಸ್ತಿ: ಲಕ್ಷ್ಮಿಬಾಯಿ ಪಾಟೀಲ್

300x250 AD

ಯಲ್ಲಾಪುರ: ಯುವ ಸಮುದಾಯ ದೇಶದ ಆಸ್ತಿಯಾಗಿದ್ದು,ಮಾನವ ಸಂಪನ್ಮೂಲವಾಗಿ ಹೊರಹೊಮ್ಮಬೇಕು ಎಂದು ಸಿವಿಲ್ ನ್ಯಾಯಾಧೀಶೆ ಲಕ್ಷ್ಮೀಬಾಯಿ ಬಸನಗೌಡ ಪಾಟೀಲ ಹೇಳಿದರು.

ಅವರು ಶುಕ್ರವಾರ ಪಟ್ಟಣದ ಸರಕಾರಿ ಪಿಯು ಕಾಲೇಜಿನಲ್ಲಿ ಕಾನೂನು ಸೇವಾ ಸಮಿತಿ ವಕೀಲರ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯುವಕರು ರಾಷ್ಟ್ರೀಯ ಮನೋಭಾವನೆ ಬೆಳಸಿಕೊಂಡು,ರಾಷ್ಟದ ಹಿತಕ್ಕಾಗಿ ಶ್ರಮಿಸಬೇಕು ಎಂದರು.

300x250 AD

ಕಾಲೇಜಿನ ಪ್ರಾಂಶುಪಾಲ ಎಸ್. ಟಿ. ಭಟ್ಟ ಅಧ್ಯಕ್ಷತೆ ವಹಿಸಿದ್ದರು. ವಕೀಲರ ಸಂಘದ ಅಧ್ಯಕ್ಷೆ ಸರಸ್ವತಿ ಭಟ್, ನ್ಯಾಯವಾದಿ ಎನ್.ಟಿ. ಗಾಂವ್ಕಾರ, ಗಣೇಶ ಪಾಟಣಕರ್, ಅರೆಕಾಲಿಕ‌ ನ್ಯಾಯಿಕ ಸ್ವಯಂಸೇವಕ ಸುಧಾಕರ ಜಿ. ನಾಯಕ ಭಾಗವಹಿಸಿದ್ದರು.

Share This
300x250 AD
300x250 AD
300x250 AD
Back to top