Slide
Slide
Slide
previous arrow
next arrow

ಶ್ರೀನಿಕೇತನದಲ್ಲಿ ಅಂತರರಾಷ್ಟ್ರೀಯ ಯುವ ದಿನಾಚರಣೆ

300x250 AD

ಶಿರಸಿ: ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಶ್ರೀನಿಕೇತನ ಶಾಲೆ, ಇಸಳೂರಿನಲ್ಲಿ ಜನವರಿ 12, ಶುಕ್ರವಾರದಂದು ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆಯ ಪ್ರಯುಕ್ತ ಅಂತರರಾಷ್ಟ್ರೀಯ ಯುವದಿನವನ್ನು ಆಚರಿಸಲಾಯಿತು. ಶಾಲೆಯ ಪ್ರಾಂಶುಪಾಲ ವಸಂತ್ ಭಟ್ ಮಾತನಾಡಿ ಸ್ವಾಮಿ ವಿವೇಕಾನಂದರು ಭಾರತದ ಶಕ್ತಿ. ಅವರು ವಿಶ್ವ ವಿಜೇತರು, ವಿಶ್ವ ಮಾನವರು ಎಂದು ಹೇಳಿದರು. ಉಪಪ್ರಾಂಶುಪಾಲರಾದ ಶ್ರೀಮತಿ ವಸುಧಾ ಹೆಗಡೆ ಹಾಗೂ ಹಿರಿಯ ಶಿಕ್ಷಕಿ ಶ್ರೀಮತಿ ಸೀತಾ ಜೋಶಿ ಉಪಸ್ಥಿತರಿದ್ದರು. 9ನೇ ತರಗತಿಯ ವಿದ್ಯಾರ್ಥಿ ಶೌರ್ಯ ಲೋಖಂಡೆ ಎಲ್ಲರನ್ನು ಸ್ವಾಗತಿಸಿದನು. ವಿದ್ಯಾರ್ಥಿನಿ ಅನುರಾಧಾ ಹೆಗಡೆ ಕಾರ್ಯಕ್ರಮವನ್ನು ನಿರೂಪಿಸಿದರೆ, ಮನೋಭಿರಾಮ್ ಹೆಗಡೆ ವಂದನಾರ್ಪಣೆ ನೀಡಿದನು.

300x250 AD
Share This
300x250 AD
300x250 AD
300x250 AD
Back to top