Slide
Slide
Slide
previous arrow
next arrow

ಕಲಿಕೋತ್ಸವ: ಕಾನಸೂರು ಪ್ರೌಢಶಾಲೆ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

300x250 AD

ಸಿದ್ದಾಪುರ: ತಾಲೂಕಿನ ಕಾನಸೂರು ಕಾಳಿಕಾ ಭವಾನಿ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಶಿರಸಿ ಗಣೇಶನಗರದ ಪ್ರೌಢಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ವೃತ್ತಿ ಶಿಕ್ಷಣ ಕಲಿಕೋತ್ಸವದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

ಪ್ರೌಢಶಾಲಾ ವಿದ್ಯಾರ್ಥಿಗಳಾದ ಮನೋಹರ ಮಂಜುನಾಥ ನಾಯ್ಕ,ಸಂಕೇತ ವಿದ್ಯಾಧರ ನಾಯ್ಕ ಹಾಗೂ ವಿ.ನಿತಿನ್ ಈ ಮೂವರು ವಿದ್ಯಾರ್ಥಿಗಳು
ಬೋರ್ಡೋ ದ್ರಾವಣ ಸಿಂಪಡಣೆಯ ಪ್ರಾತ್ಯಕ್ಷಿಕೆ ಪ್ರದರ್ಶನ ನೀಡಿದ್ದರು. ಇವರಿಗೆ ಪ್ರೌಢಶಾಲೆಯ ವೃತ್ತಿ ಶಿಕ್ಷಣ ಶಿಕ್ಷಕ.ಎಂ.ಜಿ ಪವಾರ ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಮುಖ್ಯ ಶಿಕ್ಷಕಿ ಮೀನಾ ಬೋರಕರ್ ಹಾಗೂ ಆಡಳಿತ ಮಂಡಳಿ ಅಧ್ಯಕ್ಷರು ಸದಸ್ಯರು ಹರ್ಷ ವ್ಯಕ್ತಪಡಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top