Slide
Slide
Slide
previous arrow
next arrow

ಪರ್ತಗಾಳಿ ಶ್ರೀಗಳ ಆಶೀರ್ವಾದ ಪಡೆದ ಆರ್‌ವಿ‌ಡಿ

300x250 AD

ದಾಂಡೇಲಿ : ನಗರದ ಕುಳಗಿ ರಸ್ತೆಯಲ್ಲಿರುವ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಆಯೋಜಿಸಲಾಗಿರುವ ವಿಶೇಷ ಪೂಜಾ ಕಾರ್ಯಕ್ರಮದ ನಿಮಿತ್ತ ವಾಸ್ತವ್ಯವಿರುವ  ಗೋಕರ್ಣ ಪರ್ತಗಾಳಿ ಮಠದ ಪರಮಪೂಜ್ಯ ಶ್ರೀವಿದ್ಯಾಧೀಶತೀರ್ಥ ಶ್ರೀಪಾದ ಸ್ವಾಮೀಜಿಯವರನ್ನು ಶನಿವಾರ ಶಾಸಕರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ಭೇಟಿಯಾಗಿ ಅವರಿಂದ ಆಶೀರ್ವಾದವನ್ನು ಪಡೆದು ಗೌರವ ಸಮರ್ಪಿಸಿದರು.

ಇದೇ ಸಂದರ್ಭದಲ್ಲಿ ಆರ್.ವಿ.ದೇಶಪಾಂಡೆ ಅವರನ್ನು ಶ್ರೀ ಕ್ಷೇತ್ರದ ಪರವಾಗಿ ಪರ್ತಗಾಳಿ ಸ್ವಾಮೀಜಿಯವರು ಸನ್ಮಾನಿಸಿದರು.

300x250 AD

ಪೂಜ್ಯ ಪರ್ತಗಾಳಿ ಸ್ವಾಮೀಜಿಯವರು ಆರ್.ವಿ.ದೇಶಪಾಂಡೆಯವರಲ್ಲಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ನಡೆಸಿದರು. ನೀರಾವರಿ, ಕೈಗಾರಿಕೆ, ಪ್ರವಾಸೋದ್ಯಮ ಹೀಗೆ ಮೊದಲಾದ ವಿಚಾರಗಳ ಬಗ್ಗೆ ಸ್ವಾಮೀಜಿಯವರು ದೇಶಪಾಂಡೆಯವರ ಜೊತೆ ಪರಸ್ಪರ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಆರ್ ಹೆಗಡೆ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಆರ್‌.ಪಿ.ನಾಯ್ಕ, ಜಿ.ಎಸ್.ಬಿ ಸಮಾಜದ ಮತ್ತು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಆಡಳಿತ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಜಿ.ಎಸ್.ಬಿ ಸಮಾಜ ಬಾಂಧವರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top