Slide
Slide
Slide
previous arrow
next arrow

ದಾಂಡೇಲಿಯಲ್ಲಿ ಗಮನ ಸೆಳೆದ ‘ಚಿಂತನ ರಾಮಾಯಣ’ ಕಾರ್ಯಕ್ರಮ

300x250 AD

ದಾಂಡೇಲಿ : ನಗರದ ಕುಳಗಿ ರಸ್ತೆಯಲ್ಲಿರುವ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಗೋಕರ್ಣ ಪರ್ತಗಾಳಿ ಮಠದ ಪರಮಪೂಜ್ಯ ಶ್ರೀವಿದ್ಯಾಧೀಶತೀರ್ಥ ಶ್ರೀಪಾದ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ನಡೆಯುತ್ತಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ಶ್ರೀವಿದ್ಯಾಧಿರಾಜ ಸಭಾಭವನದಲ್ಲಿ ಪ್ರಸಿದ್ಧ ಕಲಾವಿದರಾದ ಧಾರವಾಡದ ಸುಜಯ್ ಶಾನಭಾಗ್ ಹಾಗೂ ಬಳಗದವರಿಂದ ನಡೆದ ಚಿಂತನ ರಾಮಾಯಣ ಕಾರ್ಯಕ್ರಮವು ಅಪಾರ ಜನಾಕರ್ಷಣೆಗೆ ಪಾತ್ರವಾಯಿತು.

ಕಾರ್ಯಕ್ರಮವನ್ನು ವೀಕ್ಷಿಸಿದ ಪೂಜ್ಯ ಪರ್ತಗಾಳಿ ಶ್ರೀಗಳು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಸುಜಯ್ ಶಾನಭಾಗ್ ಹಾಗೂ ಅವರ ಬಳಗದವರಿಗೆ ಶುಭಾಶೀರ್ವಾದವನ್ನು ಮಾಡಿದರು.

300x250 AD

ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಬಾಂಧವರು ಹಾಗೂ ಭಕ್ತಾಭಿಮಾನಿಗಳು ಭಾಗವಹಿಸಿದ್ದರು.

Share This
300x250 AD
300x250 AD
300x250 AD
Back to top