Slide
Slide
Slide
previous arrow
next arrow

ಮಾರ್ಚ್-2023ರ ಹಾಲಿನ ಪ್ರೋತ್ಸಾಹಧನ ಜಮಾ: ಸುರೇಶ್ಚಂದ್ರ ಕೆಶಿನ್ಮನೆ

300x250 AD

ಶಿರಸಿ: ಮಾರ್ಚ್-2023 ನೇ ಮಾಹೆಯ ರೂ.5 ಪ್ರೋತ್ಸಾಹಧನವು ಜ.16, ಮಂಗಳವಾರದಂದು ಜಮಾ ಆಗಿದೆ ಎಂದು ಧಾರವಾಡ,ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಧಾರವಾಡದ ನಿರ್ದೇಶಕರಾದ ಸುರೇಶ್ಚಂದ್ರ ಕೃಷ್ಣ ಹೆಗಡೆ ಕೆಶಿನ್ಮನೆ ತಿಳಿಸಿದರು.

ಈ ಸಂದರ್ಭದಲ್ಲಿ ಹೇಳಿಕೆ ನೀಡಿದ ಅವರು 2022-2023 ನೇ ಸಾಲಿನಲ್ಲಿ ಮಾರ್ಚ್‌-2023 ನೇ ಮಾಹೆಯ ಹಾಲಿನ ಪ್ರೋತ್ಸಾಹಧನ ಹಾಲು ಉತ್ಪಾದಕ ರೈತರ ಖಾತೆಗೆ ಸರ್ಕಾರದಿಂದ ಜಮಾ ಆಗಬೇಕಾಗಿತ್ತು, ಈ ಬಗ್ಗೆ ಜುಲೈ-2023 ನೇ ಮಾಹೆಯ ಪ್ರೋತ್ಸಾಹಧನ ಜಿಲ್ಲೆಯ ರೈತರ ಖಾತೆಗೆ ಜಮಾ ಆದ ಸಂದರ್ಭದಲ್ಲಿ ನಮ್ಮಿಂದ ಸರ್ಕಾರಕ್ಕೆ ಮನವಿ ಕೂಡ ಸಲ್ಲಿಸಲಾಗಿತ್ತು, ನಮ್ಮ ಮನವಿಗೆ ಸ್ಪಂದಿಸಿ ರಾಜ್ಯ ಸರ್ಕಾರ ಜಿಲ್ಲೆಯ ಹಾಲು ಉತ್ಪಾದಕರಿಗೆ ಅನುಕೂಲವಾಗುವಂತೆ ಮಾರ್ಚ್‌-2023 ನೇ ಮಾಹೆಯ ರೂ.5 ಪ್ರೋತ್ಸಾಹಧನವನ್ನು ಜಿಲ್ಲೆಯ ಹಾಲು ಉತ್ಪಾದಕ ರೈತರ ಖಾತೆಗೆ ಜಮಾ ಮಾಡಿದೆ ಎಂದರು. 2022-2023 ನೇ ಸಾಲಿನಲ್ಲಿ ಎಲ್ಲಾ ಮಾಹೆಗಳ ರೂ.5 ಪ್ರೋತ್ಸಾಹಧನ ರಾಜ್ಯ ಸರ್ಕಾರದಿಂದ ಜಿಲ್ಲೆಯ ಹಾಲು ಉತ್ಪಾದಕರ ರೈತರ ಖಾತೆಗೆ ಈಗ ಜಮಾ ಆದಂತಾಗಿದೆ ಎಂದರು. ಇನ್ನುಳಿದಂತೆ 2023-2024 ನೇ ಸಾಲಿನಲ್ಲಿ ಅಗಸ್ಟ್‌, ಸಪ್ಟೆಂಬರ್‌, ಅಕ್ಟೋಬರ್‌, ನವೆಂಬರ್‌ ಹಾಗೂ ಡಿಸೆಂಬರ್‌ ಮಾಹೆಗಳ ರೂ. 5 ಪ್ರೋತ್ಸಾಹಧನ ಸರ್ಕಾರದಿಂದ ಹಾಲು ಉತ್ಪಾದಕ ರೈತರ ಖಾತೆಗೆ ಜಮಾ ಆಗಬೇಕಾಗಿದೆ ಎಂದು ಮಾಹಿತಿ ನೀಡಿದರು. ಮಾರ್ಚ್-2023 ನೇ ಮಾಹೆಯ ರೂ. 5 ಪ್ರೋತ್ಸಾಹಧನ ಜಮಾ ಆಗದ ಹಾಲು ಉತ್ಪಾದಕ ರೈತರು ಕೂಡಲೇ ಆಯಾ ವ್ಯಾಪ್ತಿಯ ವಿಸ್ತರಣಾಧಿಕಾರಿಗಳನ್ನು ಸಂಪರ್ಕಿಸಲು ಸೂಚಿಸಿದರು.

300x250 AD
Share This
300x250 AD
300x250 AD
300x250 AD
Back to top