ಸಿದ್ದಾಪುರ: ತಾಲೂಕಿನ ಮನಮನೆಯ ಶನೀಶ್ವರ ದೇವಸ್ಥಾನದ ಬಳಿ ಅಂದರ್ ಬಾಹರ್ ಆಟ ಆಡುತ್ತಿದ್ದ 16 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಶನೀಶ್ವರ ದೇವಾಲಯದ ಬಳಿ 16 ಜನರ ತಂಡ ಅಂದರ್-ಬಹಾರ್ ಆಟ ಆಡುತ್ತಿದ್ದ ವೇಳೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರ ತಂಡ ಆರೋಪಿಗಳಿಂದ 32,200 ನಗದನ್ನು ವಶಕ್ಕೆ ಪಡೆದಿದ್ದಾರೆ. ಪಿಎಸ್ಐ ಮಹಾಂತೇಶ ಕುಂಬಾರ ಮತ್ತು ಸಿಬ್ಬಂದಿಗಳ ತಂಡ ದಾಳಿ ಮಾಡಿದ್ದು, ಪ್ರಕರಣ ದಾಖಲಿಸಿದ್ದಾರೆ.