ಶಿರಸಿ: ಭಾರತೀಯ ಜನತಾ ಪಾರ್ಟಿ, ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಕಾರ್ಯಕಾರಿಣಿ ವಿಶೇಷ ಸಭೆಯು ತಾಲೂಕಿನ ಶ್ರೀ ಗಣಪತಿ ಸಭಾಂಗಣ, ಮುಂಡಗೇಸರದಲ್ಲಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ ಅವರ ಅಧ್ಯಕ್ಷತೆಯಲ್ಲಿ ಜರುಗಿತು.
ಮಾಜಿ ಶಾಸಕ, ರಾಜ್ಯ ಕಾರ್ಯಕಾರಿಣಿ ಸದಸ್ಯ ಸುನೀಲ ಹೆಗಡೆ ಸಭೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿಭಾಗ ಪ್ರಭಾರಿ ಗಿರೀಶ ಪಟೇಲ್, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಗಣೇಶ ರಾವ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಜಿ.ನಾಯ್ಕ, ವಿಭಾಗ ಸಹ ಪ್ರಭಾರಿ ಎನ್.ಎಸ್.ಹೆಗಡೆ, ಶಿವಮೊಗ್ಗ ಪ್ರಭಾರಿಗಳು ಹಾಗೂ ವಿಶೇಷ ಆಹ್ವಾನಿತರು ಉಪಸ್ಥಿತರಿದ್ದರು.