ಶಿರಸಿ: ದೇಶದ ಪ್ರತಿಷ್ಠಿತ ಉದ್ದಿಮೆಗಳಲ್ಲೊಂದಾದ ಟಾಟಾ ಕನ್ಸಲ್ಟನ್ಸಿ ಸರ್ವೀಸ್ ಕರ್ನಾಟಕ ಸರಕಾರದ ವಿಜ್ಞಾನ ತಂತ್ರಜ್ಞಾನ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಮೂಲಕ ಸಂವಹನ ತಂತ್ರಜ್ಞಾನ ಜಾಗೃತಿಯ ಕುರಿತಾಗಿ ನಡೆಸುವ ಗ್ರಾಮೀಣ ಐಟಿ ರಸಪ್ರಶ್ನೆ ಸ್ಪರ್ಧೆಯಲ್ಲಿ ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಲಯನ್ಸ್ ಶಿಕ್ಷಣ ಸಂಸ್ಥೆಯ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಪ್ರದರ್ಶಿಸಿದ್ದಾರೆ.
9ನೇ ತರಗತಿಯಲ್ಲಿ ಓದುತ್ತಿರುವ ಜಯಂತ್ ನಾಗಪತಿ ಹೆಗಡೆ ಹಾಗೂ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಧೀರಜ್ ಮಹಾದೇವ ನಾಯ್ಕ ಇವರು ಜಿಲ್ಲಾ ಮಟ್ಟದ ರೂರಲ್ ಐಟಿ ಕ್ವಿಜ್ನಲ್ಲಿ ಭಾಗವಹಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರ ಈ ಸಾಧನೆಗೆ ಲಯನ್ಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಮುಖ್ಯಾಧ್ಯಾಪಕರು ಹಾಗೂ ಶಿಕ್ಷಕ ವೃಂದ ಹರ್ಷ ವ್ಯಕ್ತ ಪಡಿಸಿದ್ದಾರೆ.