Slide
Slide
Slide
previous arrow
next arrow

ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆ ಬಗ್ಗೆ ಅರಿವು

300x250 AD

ಜೋಯಿಡಾ: ತಾಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಬಗ್ಗೆ ಅರಿವು ಮೂಡಿಸುವ ಅಭಿಯಾನವನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಲ್ಪನಾ ನೇತೃತ್ವದಲ್ಲಿ ಆಯೋಜಿಸಲಾಯಿತು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಲ್ಪನಾ, ಈ ಅಭಿಯಾನದ ಬಗ್ಗೆ ಮಾತನಾಡುತ್ತಾ, ವಿಶೇಷವಾಗಿ ಹೆಣ್ಣು ಮಕ್ಕಳು ಶಿಕ್ಷಣವಂತರಾದರೇ ಸದೃಢ ಸಮಾಜ ನಿರ್ಮಾಣ ಸಾಧ್ಯ.ಈ ನಿಟ್ಟಿನಲ್ಲಿ ಜನಮಾನಸಕ್ಕೆ ಅರಿವು ಮೂಡಿಸುವ‌ ಮೂಲಕ ಪ್ರತಿಯೊಂದು ಮಗುವನ್ನು ಶಿಕ್ಷಣವಂತ‌ನನ್ನಾಗಿಸುವುದು ಈ ಕಾರ್ಯಕ್ರಮದ ಆಶಯವಾಗಿದೆ ಎಂದರು. ಹೆಣ್ಣುಮಕ್ಕಳ ಆರೋಗ್ಯ ರಕ್ಷಣೆಯು ಕೂಡ ಪ್ರತಿಯೊಬ್ಬ ಪಾಲಕರ ಮುಖ್ಯ ಜವಾಬ್ದಾರಿಯಾಗಿದೆ ಎಂದರು.

300x250 AD

ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ವಲಯ ಮೇಲ್ವಿಚಾರಕಿಯರು, ಮಕ್ಕಳು, ಕಿಶೋರಿಯರು ಹಾಗೂ ಮಕ್ಕಳ ಪಾಲಕರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top