Slide
Slide
Slide
previous arrow
next arrow

75ನೇ ಗಣರಾಜ್ಯೋತ್ಸವ ಆಚರಣೆ

300x250 AD

ಶಿರಸಿ: ತಾಲೂಕ ಆಡಳಿತ, ನಗರಸಭೆ ಹಾಗೂ ತಾಲೂಕ ಪಂಚಾಯತ, ಶಿರಸಿ ಇವರ ಸಂಯುಕ್ತ ಆಶ್ರಯದಲ್ಲಿ 75 ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ನಗರದ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಜ.26, ಶುಕ್ರವಾರದಂದು ಆಯೋಜಿಸಲಾಗಿದ್ದು, ಬೆಳಿಗ್ಗೆ 9 ಗಂಟೆಗೆ ಉಪವಿಭಾಗಾಧಿಕಾರಿ ಅಪರ್ಣಾ ರಮೇಶ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿಧಾನ‌ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಆಡಳಿತ ಸುಧಾರಣಾ ಆಯೋಗ ಅಧ್ಯಕ್ಷ ಆರ್.ವಿ.ದೇಶಪಾಂಡೆ ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಭೀಮಣ್ಣ ನಾಯ್ಕ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ‌ ಸಂಸದ ಅನಂತಕುಮಾರ್ ಹೆಗಡೆ, ಎಸ್.ವಿ.ಸಂಕನೂರು, ಶಾಸಕ ಶಿವರಾಮ ಹೆಬ್ಬಾರ್, ಶಾಂತಾರಾಮ‌ ಸಿದ್ದಿ, ಶ್ರೀಮತಿ ದೀಪಾ ಮಹಲಿಂಗಣ್ಣನವರ, ಡಿಡಿಪಿಐ ಪಿ.ಬಸವರಾಜ, ಡಿವೈಎಸ್‌ಪಿ ಕೆ.ಎಲ್.ಗಣೇಶ್ ಆಗಮಿಸಲಿದ್ದಾರೆ‌.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.

300x250 AD
Share This
300x250 AD
300x250 AD
300x250 AD
Back to top