Slide
Slide
Slide
previous arrow
next arrow

ಶ್ರೀಬನಶಂಕರಿ ದೇವಿ ಜಾತ್ರಾ ಮಹೋತ್ಸವ ಸಂಪನ್ನ

300x250 AD

ದಾಂಡೇಲಿ: ನಗರದ ಟೌನಶಿಪ್’ನಲ್ಲಿರುವ ಶ್ರೀಬನಶಂಕರಿ ದೇವಿ ಮಂದಿರದ ಜಾತ್ರಾ ಮಹೋತ್ಸವವು ಸಂಭ್ರಮ ಸಡಗರ ಹಾಗೂ ಶ್ರದ್ಧಾ ಭಕ್ತಿಯಿಂದ ಗುರುವಾರ ಜರುಗಿತು.

ಬೆಳಿಗ್ಗೆ ಶ್ರೀದೇವಿಯ ಮಹಾಮಂಗಳಾರತಿ ಜರುಗಿ ಆನಂತರ ಪಲ್ಲಕ್ಕಿ ಉತ್ಸವ ಆರಂಭಗೊಂಡಿತು. ಪಲ್ಲಕ್ಕಿ ಉತ್ಸವವು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಕೊನೆಯಲ್ಲಿ ಶ್ರೀಸ್ವಾಮಿ ಸನ್ನಿಧಿಯಲ್ಲಿ ಸಂಪನ್ನಗೊಂಡಿತು. ಆನಂತರ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು‌. ಮಧ್ಯಾಹ್ನ ಮಹಾಪೂಜೆಯದ ಬಳಿಕ ಮಹಾಪ್ರಸಾದ ವಿತರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದ ಯಶಸ್ಸಿಗೆ ಶ್ರೀಬನಶಂಕರಿ ದೇವಿ ದೇವಸ್ಥಾನದ ಆಡಳಿತ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತು ಭಕ್ತಾಭಿಮಾನಿಗಳು ಶ್ರಮಿಸಿದ್ದರು.

300x250 AD

Share This
300x250 AD
300x250 AD
300x250 AD
Back to top